<p><strong>ಬೆಂಗಳೂರು:</strong> ‘ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಶುಕ್ರವಾರ ಸದನದೊಳಕ್ಕೆ ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ಪ್ರಸಾರವಾಗಿರುವ ವರದಿಯ ಸತ್ಯಾಸತ್ಯತೆ ಪರಿಶೀಲಿಸಲು ಈ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಲಾಗಿದೆ.</p>.<p>ಶುಕ್ರವಾರ ಪ್ರಶ್ನೊತ್ತರ ಕಲಾಪದ ಅವಧಿಯಲ್ಲಿ ರಾಠೋಡ್ ಅವರು ಮೊಬೈಲ್ ಗ್ಯಾಲರಿಯನ್ನು ನೋಡುತ್ತಿದ್ದ ದೃಶ್ಯ ಸುದ್ದಿ ವಾಹಿನಿಗಳ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ‘ಪ್ರಕಾಶ್ ರಾಠೋಡ್ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ವರದಿಯೂ ಆಗಿತ್ತು. ಅದನ್ನು ರಾಠೋಡ್ ಅಲ್ಲಗಳೆದಿದ್ದರು.</p>.<p>ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಈ ವಿಷಯ ಪ್ರಸ್ತಾಪಿಸಿದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ‘ಶುಕ್ರವಾರ ಸದಸ್ಯರೊಬ್ಬರು ಮೊಬೈಲ್ನಲ್ಲಿ ಆಕ್ಷೇಪಾರ್ಹ ವಿಡಿಯೊ ನೋಡುತ್ತಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಅದಕ್ಕಾಗಿ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಿದ್ದೇನೆ’ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಶುಕ್ರವಾರ ಸದನದೊಳಕ್ಕೆ ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ಪ್ರಸಾರವಾಗಿರುವ ವರದಿಯ ಸತ್ಯಾಸತ್ಯತೆ ಪರಿಶೀಲಿಸಲು ಈ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಲಾಗಿದೆ.</p>.<p>ಶುಕ್ರವಾರ ಪ್ರಶ್ನೊತ್ತರ ಕಲಾಪದ ಅವಧಿಯಲ್ಲಿ ರಾಠೋಡ್ ಅವರು ಮೊಬೈಲ್ ಗ್ಯಾಲರಿಯನ್ನು ನೋಡುತ್ತಿದ್ದ ದೃಶ್ಯ ಸುದ್ದಿ ವಾಹಿನಿಗಳ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ‘ಪ್ರಕಾಶ್ ರಾಠೋಡ್ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ವರದಿಯೂ ಆಗಿತ್ತು. ಅದನ್ನು ರಾಠೋಡ್ ಅಲ್ಲಗಳೆದಿದ್ದರು.</p>.<p>ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಈ ವಿಷಯ ಪ್ರಸ್ತಾಪಿಸಿದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ‘ಶುಕ್ರವಾರ ಸದಸ್ಯರೊಬ್ಬರು ಮೊಬೈಲ್ನಲ್ಲಿ ಆಕ್ಷೇಪಾರ್ಹ ವಿಡಿಯೊ ನೋಡುತ್ತಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಅದಕ್ಕಾಗಿ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಿದ್ದೇನೆ’ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>