<p><strong>ಬೆಳಗಾವಿ (ಸುವರ್ಣಸೌಧ):</strong> ‘ಹೊಸ ಮೀಸಲಾತಿ ಅನುಸಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ 3,200 ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.</p><p>ರಾಜ್ಯದ ಗ್ರಾಮೀಣ ಭಾಗದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸುವ ಕುರಿತಂತೆ ಕಾಂಗ್ರೆಸ್ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸರ್ಕಾರದ ಸೆಳೆದರು. ಅದಕ್ಕೆ ಉತ್ತರಿಸಿದ ಮುನಿಯಪ್ಪ, ‘ನಿಯಮದಂತೆ 3 ಕಿ.ಮೀ.ಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಗಳಿಲ್ಲದ ಕಡೆಗಳಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗುವುದು’ ಎಂದರು.</p><p>‘ಗುಡ್ಡಗಾಡು ಪ್ರದೇಶದಲ್ಲಿ ಕಡಿಮೆ ಪಡಿತರ ಚೀಟಿದಾರರಿದ್ದರೂ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತೇವೆ. ಗ್ರಾಮಾಂತರ ಭಾಗದಲ್ಲಿ 500 ಮತ್ತು ನಗರ ಪ್ರದೇಶದಲ್ಲಿ 800 ಪಡಿತರ ಚೀಟಿಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ. ಇದೀಗ ಎಸ್ಸಿ, ಎಸ್ಟಿ ಸಮುದಾಯದವರಿಗಾಗಿ ಹೊಸದಾಗಿ 3,200 ನ್ಯಾಯಬೆಲೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣಸೌಧ):</strong> ‘ಹೊಸ ಮೀಸಲಾತಿ ಅನುಸಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ 3,200 ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.</p><p>ರಾಜ್ಯದ ಗ್ರಾಮೀಣ ಭಾಗದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸುವ ಕುರಿತಂತೆ ಕಾಂಗ್ರೆಸ್ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸರ್ಕಾರದ ಸೆಳೆದರು. ಅದಕ್ಕೆ ಉತ್ತರಿಸಿದ ಮುನಿಯಪ್ಪ, ‘ನಿಯಮದಂತೆ 3 ಕಿ.ಮೀ.ಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಗಳಿಲ್ಲದ ಕಡೆಗಳಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗುವುದು’ ಎಂದರು.</p><p>‘ಗುಡ್ಡಗಾಡು ಪ್ರದೇಶದಲ್ಲಿ ಕಡಿಮೆ ಪಡಿತರ ಚೀಟಿದಾರರಿದ್ದರೂ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತೇವೆ. ಗ್ರಾಮಾಂತರ ಭಾಗದಲ್ಲಿ 500 ಮತ್ತು ನಗರ ಪ್ರದೇಶದಲ್ಲಿ 800 ಪಡಿತರ ಚೀಟಿಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ. ಇದೀಗ ಎಸ್ಸಿ, ಎಸ್ಟಿ ಸಮುದಾಯದವರಿಗಾಗಿ ಹೊಸದಾಗಿ 3,200 ನ್ಯಾಯಬೆಲೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>