ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಲು ಕೇಸರಿ ಪಡೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಮಾಲೀಕಯ್ಯ ಗುತ್ತೇದಾರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಾಬುರಾವ್ ಚಿಂಚನಸೂರ ಅವರನ್ನು ಪಕ್ಷಕ್ಕೆ ಬುಧವಾರ ಸೇರಿಸಿಕೊಳ್ಳಲಾಗಿದೆ. ರತ್ನಪ್ರಭಾ ಅವರನ್ನು ಸೇರಿಸಿಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ ಎಂಬುದು ಬಿಜೆಪಿ ನಾಯಕರ ಅಭಿಮತ.