ಹತ್ತು ದಿನಗಳ ಕಾಲ ವಿಚಾರಣೆಗಾಗಿ ರವಿ ಪೂಜಾರಿಯನ್ನು ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ನಗರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕೋರಿಕೆಯನ್ನು ಮಾನ್ಯ ಮಾಡಿ ನ್ಯಾಯಾಲಯ ನವೆಂಬರ್ 13ರಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ರವಿ ಪೂಜಾರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಮುಂಬೈ ಪೊಲೀಸರಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ನೇತೃತ್ವದ ಏಕಸದಸ್ಯ ಪೀಠ, ನವೆಂಬರ್ 27ಕ್ಕೆ ವಿಚಾರಣೆ ಮುಂದೂಡಿದೆ.