ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಉದ್ದೇಶ ಪೂರ್ವಕವಾಗಿ ಸದನದಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ನೀಡಲಿಲ್ಲ. ಮಾತ್ರವಲ್ಲದೆ, ಅದನ್ನು ತಿರಸ್ಕರಿಸಿದರು. ಸದನದ ನಿಯಮಾವಳಿಗೆ ವಿರುದ್ಧವಾಗಿ ನಡೆದುಕೊಂಡರು. ಇವತ್ತಿನ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯರು ಉಪಸಭಾಪತಿಯವರನ್ನು ಬಲವಂತವಾಗಿ ಎಬ್ಬಿಸಿ ಹೊರ ದೂಡಿದ್ದು, ಬಾಗಿಲನ್ನು ಒದ್ದು ತೆರೆದದ್ದು ಗೂಂಡಾ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದು ರವಿಕುಮಾರ್ ಹೇಳಿದರು.