ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದಿದ್ದ 17 ಶಾಸಕರ ಪೈಕಿ 15 ಶಾಸಕರ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಮವಾರ12 ಕ್ಷೇತ್ರಗಳನ್ನು ಗೆದ್ದು ಬೀಗಿತ್ತು. ಕಾಂಗ್ರೆಸ್ ಎರಡು, ಪಕ್ಷೇತರ ಒಂದು ಸ್ಥಾನ ಬಿಟ್ಟರೆ, ಜೆಡಿಎಸ್ ಒಂದೂ ಸ್ಥಾನ ಗೆಲ್ಲಲಿಲ್ಲ.ಜೆಡಿಎಸ್ನ ಭದ್ರಕೋಟೆ ಎನಿಸಿದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲೂ ಬಿಜೆಪಿ ಗೆದ್ದಿದ್ದು ಜೆಡಿಎಸ್ಗೆ ಭಾರಿ ಮುಖಭಂಗ ಉಂಟು ಮಾಡಿತ್ತು. ಮಂಡ್ಯದಂಥ ಜಿಲ್ಲೆಯಲ್ಲೇ ಸೋಲುಂಟಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ ಎಂದು ರಾಜಕೀಯ ವ್ಯಾಖ್ಯಾನಗಳು ಕೇಳಿಬಂದಿದ್ದವು.