<p><strong>ಬೆಂಗಳೂರು:</strong> ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಮಾಧ್ಯಮಗಳ ವರದಿ ಹಾಗೂ ಹಲವು ವಕೀಲರ ಮನವಿಗಳನ್ನು ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಗುರುವಾರ ದಾಖಲಿಸಿಕೊಂಡಿತು.</p><p>‘ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿಕೊಳ್ಳುವುದನ್ನು ಪ್ರತಿರೋಧಿಸುವುದಿಲ್ಲ. ಹೈಕೋರ್ಟ್ ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ದವಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p><p>‘ಘಟನೆ ನಡೆದಾಗ ಸ್ಥಳದಲ್ಲಿ ಒಬ್ಬ ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಕಮಿಷನರ್, 7 ಡಿಸಿಪಿ, 7 ಎಸಿಪಿ, 48 ಪೊಲೀಸ್ ಇನ್ಸ್ಪೆಕ್ಟರ್, 151 ಪಿಎಸ್ಐ, 1,092 ಪೊಲೀಸ್ ಕಾನ್ಸ್ಟೆಬಲ್ ಸೇರಿದಂತೆ ಒಟ್ಟು 1,380 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ತಲಾ 25 ಸಿಬ್ಬಂದಿಯನ್ನು ಒಳಗೊಂಡ 13 ಕೆಎಸ್ಆರ್ಪಿ ತುಕಡಿಯನ್ನೂ ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು. ಒಟ್ಟು 1,643 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು’ ಎಂದು ವಿವರಿಸಿದರು.</p><p><strong>ವಕೀಲರ ಮನವಿ:</strong> ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಆರ್.ಹೇಮಂತರಾಜು, ರಂಗನಾಥ ರೆಡ್ಡಿ, ಜಿ.ಆರ್.ಮೋಹನ್ ಮತ್ತು ಲೋಹಿತ್ ಜಿ.ಹನುಮಾಪುರ ಹಾಗೂ ಎಸ್.ನಟರಾಜ ಶರ್ಮಾ ನ್ಯಾಯಪೀಠಕ್ಕೆ ತಮ್ಮ ಮನವಿಗಳನ್ನು ಸಲ್ಲಿಸಿ ಪರಿಗಣಿಸುವಂತೆ ಕೋರಿದರು.</p><p>ಅಂತಿಮವಾಗಿ ಘಟನೆಯ ಕುರಿತಾದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 10ಕ್ಕೆ (ಮಂಗಳವಾರ) ಮುಂದೂಡಿತು. ತಮ್ಮನ್ನು ಮಧ್ಯಂತರ ಅರ್ಜಿದಾರರನ್ನಾಗಿ ಪರಿಗಣಿಸಬೇಕು ಎಂಬ ವಕೀಲರ ಮನವಿಗೆ, ವಸ್ತುಸ್ಥಿತಿ ವರದಿ ಬಂದ ಬಳಿಕ ಮನವಿಪರಿಶೀಲಿಸಲಾಗುವುದು ಎಂದು ತಿಳಿಸಿತು.</p>.Bengaluru Stampede | ಕಾಲ್ತುಳಿತ ದುರಂತ; ಹೃದಯ ಒಡೆದಿದೆ: ವಿರಾಟ್ ಕೊಹ್ಲಿ.ಕಾಲ್ತುಳಿತ: ಗೃಹ ಸಚಿವ ಪರಮೇಶ್ವರ ರಾಜೀನಾಮೆ ಕೊಡಲಿ– ಶಾಸಕ ಆರಗ ಜ್ಞಾನೇಂದ್ರ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಮಾಧ್ಯಮಗಳ ವರದಿ ಹಾಗೂ ಹಲವು ವಕೀಲರ ಮನವಿಗಳನ್ನು ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಗುರುವಾರ ದಾಖಲಿಸಿಕೊಂಡಿತು.</p><p>‘ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿಕೊಳ್ಳುವುದನ್ನು ಪ್ರತಿರೋಧಿಸುವುದಿಲ್ಲ. ಹೈಕೋರ್ಟ್ ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ದವಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p><p>‘ಘಟನೆ ನಡೆದಾಗ ಸ್ಥಳದಲ್ಲಿ ಒಬ್ಬ ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಕಮಿಷನರ್, 7 ಡಿಸಿಪಿ, 7 ಎಸಿಪಿ, 48 ಪೊಲೀಸ್ ಇನ್ಸ್ಪೆಕ್ಟರ್, 151 ಪಿಎಸ್ಐ, 1,092 ಪೊಲೀಸ್ ಕಾನ್ಸ್ಟೆಬಲ್ ಸೇರಿದಂತೆ ಒಟ್ಟು 1,380 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ತಲಾ 25 ಸಿಬ್ಬಂದಿಯನ್ನು ಒಳಗೊಂಡ 13 ಕೆಎಸ್ಆರ್ಪಿ ತುಕಡಿಯನ್ನೂ ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು. ಒಟ್ಟು 1,643 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು’ ಎಂದು ವಿವರಿಸಿದರು.</p><p><strong>ವಕೀಲರ ಮನವಿ:</strong> ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಆರ್.ಹೇಮಂತರಾಜು, ರಂಗನಾಥ ರೆಡ್ಡಿ, ಜಿ.ಆರ್.ಮೋಹನ್ ಮತ್ತು ಲೋಹಿತ್ ಜಿ.ಹನುಮಾಪುರ ಹಾಗೂ ಎಸ್.ನಟರಾಜ ಶರ್ಮಾ ನ್ಯಾಯಪೀಠಕ್ಕೆ ತಮ್ಮ ಮನವಿಗಳನ್ನು ಸಲ್ಲಿಸಿ ಪರಿಗಣಿಸುವಂತೆ ಕೋರಿದರು.</p><p>ಅಂತಿಮವಾಗಿ ಘಟನೆಯ ಕುರಿತಾದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 10ಕ್ಕೆ (ಮಂಗಳವಾರ) ಮುಂದೂಡಿತು. ತಮ್ಮನ್ನು ಮಧ್ಯಂತರ ಅರ್ಜಿದಾರರನ್ನಾಗಿ ಪರಿಗಣಿಸಬೇಕು ಎಂಬ ವಕೀಲರ ಮನವಿಗೆ, ವಸ್ತುಸ್ಥಿತಿ ವರದಿ ಬಂದ ಬಳಿಕ ಮನವಿಪರಿಶೀಲಿಸಲಾಗುವುದು ಎಂದು ತಿಳಿಸಿತು.</p>.Bengaluru Stampede | ಕಾಲ್ತುಳಿತ ದುರಂತ; ಹೃದಯ ಒಡೆದಿದೆ: ವಿರಾಟ್ ಕೊಹ್ಲಿ.ಕಾಲ್ತುಳಿತ: ಗೃಹ ಸಚಿವ ಪರಮೇಶ್ವರ ರಾಜೀನಾಮೆ ಕೊಡಲಿ– ಶಾಸಕ ಆರಗ ಜ್ಞಾನೇಂದ್ರ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>