ಕಾರ್ಯಕ್ರಮದ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿ ಸರ್ಕಾರದ ಲೋಪದೋಷದ ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ, ವರದಿ ನೀಡುವರೇ?
ಆರ್. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಚಿವರ ಮಕ್ಕಳ ಒತ್ತಡಕ್ಕೆ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತೇ? ಕಾಲ್ತುಳಿತದ ಸಾವಿನ ಹೊಣೆ ಹೊತ್ತು ರಾಜ್ಯ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು
-ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
11 ಜನರ ಆಟದ ಗೆಲುವಿನ ಸಂಭ್ರಮಕ್ಕೆ 11 ಜನರನ್ನು ರಾಜ್ಯ ಸರ್ಕಾರ ಬಲಿ ಪಡೆದಿದೆ. ಸದ್ಯ ಈ ಘಟನೆಗೆ ಬಿಜೆಪಿ, ಆರ್ಎಸ್ಎಸ್ ನಾಯಕರು ಕಾರಣವೆಂದು ಮುಖ್ಯಮಂತ್ರಿ ಏಕೆ ಹೇಳುತ್ತಿಲ್ಲ?
ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ
ಕಾಲ್ತುಳಿತಕ್ಕೆ ಸಿಲುಕಿ ಜನರು ಮೃತಪಟ್ಟಿದ್ದರೂ, ಆಡಳಿತ ಪಕ್ಷದ ಪ್ರಮುಖರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಉಪಮುಖ್ಯಮಂತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಪ್ಗೆ ಮುತ್ತಿಕ್ಕುತ್ತಿದ್ದರು.