‘ಕಡತಗಳಿಗಾಗಿ ಹಲವು ದಿನ ಶೋಧಿಸಲಾಗಿತ್ತು. ಆದರೆ, ಕಡತಗಳು ಲಭ್ಯವಾಗಿರಲಿಲ್ಲ. ಈ ಬಗ್ಗೆ ಕಾರಣ ಕೇಳಿ ದಿನೇಶ್ಕುಮಾರ್ಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ಅವರು ಯಾವುದೇ ಉತ್ತರ ನೀಡಿಲ್ಲ. ಕಡತಗಳ ನಾಪತ್ತೆ ಹಿಂದೆ ಹಲವರ ಕೈವಾಡವಿರುವ ಶಂಕೆ ಇದೆ. ಹೀಗಾಗಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.