‘ಹಣ ಅಕ್ರಮವಾಗಿ ಸ್ವೀಕರಿಸಿದ ಆರೋಪವಿದ್ದು, ಪ್ರತಿಫಲಾಪೇಕ್ಷೆಯ ಆರೋಪವನ್ನೂ ಮಾಡಿರುವಾಗ ಇದರಲ್ಲಿ ದುರುದ್ದೇಶ ಇದೆಯೇ? ಜನಪ್ರತಿನಿಧಿಗಳಿಗೆ ಇರುವ ನೀತಿ ಸಂಹಿತೆ ಉಲ್ಲಂಘಿಸಲಾಗಿದೆಯೇ ಎಂಬುದನ್ನೆಲ್ಲಾ ತನಿಖಾ ಸಂಸ್ಥೆ ಪರಿಶೀಲಿಸಬೇಕು. ಇದನ್ನು ಪರಿಗಣಿಸದೇ ಸಲ್ಲಿಸುವ ವರದಿಯನ್ನು ಪೂರ್ಣ ವರದಿ ಎನ್ನಲಾಗದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.