<p><strong>ಬೆಂಗಳೂರು</strong>: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇದೇ 15ರಂದು ಎಲ್ಲ ಶಾಲೆ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದುವಿಕೆ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಉದ್ದೇಶವನ್ನು ಮಕ್ಕಳಿಗೆ ಅರ್ಥ ಮಾಡಿಸಬೇಕೆಂಬ ಕಾರಣಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ನಾವೇ ಒಪ್ಪಿ ನಾವೇ ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿರುವ ಅಂಶಗಳು ಮುಂದಿನ ಪೀಳಿಗೆಗೂ ಅರ್ಥ ಆಗಬೇಕು. ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸಿ ಎಲ್ಲರೂ ಸೋದರತೆಯಿಂದ ಬಾಳಲು ಸಂವಿಧಾನದ ಆಶಯ ಪೂರಕವಾಗಿದೆ’ ಎಂದರು.</p>.<p>‘ಮೂಲಭೂತ ಹಕ್ಕುಗಳು ಎಲ್ಲರಿಗೂ ಗೊತ್ತಿವೆ. ಆದರೆ, ಆ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಹೀಗಾಗಿ, ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂವಿಧಾನ ಪೀಠಿಕೆ ಓದುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡು ಕೋಟಿ ಜನರು ಹೆಸರು ನೋಂದಾಯಿಸಿದ್ದಾರೆ. ಇದು ಆಂದೋಲನ ಆಗಬೇಕು ಎನ್ನುವುದು ನಮ್ಮ ಆಶಯ’ ಎಂದೂ ಹೇಳಿದರು.</p>.<p>‘ಕೇವಲ ಶಾಲಾ ಕಾಲೇಜಿಗೆ ಮಾತ್ರ ಸಂವಿಧಾನ ಪೀಠಿಕೆ ಓದುವಿಕೆ ಅನ್ವಯ ಅಲ್ಲ. ಸರ್ಕಾರಿ ಕಚೇರಿಗಳಿಗೂ ಅನ್ವಯವಾಗಲಿದೆ. ಮುಖ್ಯಮಂತ್ರಿ ಕಚೇರಿಯಲ್ಲೂ ಇದನ್ನು ಓದಬೇಕು. ಸಂವಿಧಾನದಲ್ಲಿ ಎಲ್ಲರೂ ಸಮಾನರೇ. ಯಾರು ಕಡಿಮೆ ಅಲ್ಲ. ಯಾರೂ ಹೆಚ್ಚು ಅಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇದೇ 15ರಂದು ಎಲ್ಲ ಶಾಲೆ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದುವಿಕೆ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಉದ್ದೇಶವನ್ನು ಮಕ್ಕಳಿಗೆ ಅರ್ಥ ಮಾಡಿಸಬೇಕೆಂಬ ಕಾರಣಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ನಾವೇ ಒಪ್ಪಿ ನಾವೇ ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿರುವ ಅಂಶಗಳು ಮುಂದಿನ ಪೀಳಿಗೆಗೂ ಅರ್ಥ ಆಗಬೇಕು. ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸಿ ಎಲ್ಲರೂ ಸೋದರತೆಯಿಂದ ಬಾಳಲು ಸಂವಿಧಾನದ ಆಶಯ ಪೂರಕವಾಗಿದೆ’ ಎಂದರು.</p>.<p>‘ಮೂಲಭೂತ ಹಕ್ಕುಗಳು ಎಲ್ಲರಿಗೂ ಗೊತ್ತಿವೆ. ಆದರೆ, ಆ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಹೀಗಾಗಿ, ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂವಿಧಾನ ಪೀಠಿಕೆ ಓದುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡು ಕೋಟಿ ಜನರು ಹೆಸರು ನೋಂದಾಯಿಸಿದ್ದಾರೆ. ಇದು ಆಂದೋಲನ ಆಗಬೇಕು ಎನ್ನುವುದು ನಮ್ಮ ಆಶಯ’ ಎಂದೂ ಹೇಳಿದರು.</p>.<p>‘ಕೇವಲ ಶಾಲಾ ಕಾಲೇಜಿಗೆ ಮಾತ್ರ ಸಂವಿಧಾನ ಪೀಠಿಕೆ ಓದುವಿಕೆ ಅನ್ವಯ ಅಲ್ಲ. ಸರ್ಕಾರಿ ಕಚೇರಿಗಳಿಗೂ ಅನ್ವಯವಾಗಲಿದೆ. ಮುಖ್ಯಮಂತ್ರಿ ಕಚೇರಿಯಲ್ಲೂ ಇದನ್ನು ಓದಬೇಕು. ಸಂವಿಧಾನದಲ್ಲಿ ಎಲ್ಲರೂ ಸಮಾನರೇ. ಯಾರು ಕಡಿಮೆ ಅಲ್ಲ. ಯಾರೂ ಹೆಚ್ಚು ಅಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>