1989ರವರೆಗೆ ಕರ್ನಾಟಕದ ಸರ್ಕಾರಿ ವಲಯದ ಉದ್ಯಮವಾಗಿದ್ದ ವಿಐಎಸ್ಪಿ, ಇತ್ತೀಚಿನ ವರ್ಷಗಳಲ್ಲಿ ಎಸ್ಎಐಎಲ್ನ ಅಸಮರ್ಪಕ ಬಂಡವಾಳ ಹೂಡಿಕೆ ನೀತಿಯಿಂದ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸುತ್ತಿದೆ. ಮೂರು ದಶಕಗಳಲ್ಲಿ ಉಕ್ಕು ಪ್ರಾಧಿಕಾರದ ಇತರ ಘಟಕಗಳಲ್ಲಿನ ಗಮನಾರ್ಹ ಹೂಡಿಕೆಗೆ ಹೋಲಿಸಿದರೆ, ವಿಐಎಸ್ಪಿಯಲ್ಲಿ ದುರಸ್ತಿ ಮತ್ತು ನವೀಕರಣ ಉದ್ದೇಶಗಳಿಗೆ ಕೇವಲ ₹157 ಕೋಟಿ ವೆಚ್ಚ ಮಾಡಲಾಗಿದೆ. ರಾಮದುರ್ಗದಲ್ಲಿನ 497 ಎಕರೆ ಪ್ರದೇಶದಲ್ಲಿನ ಕಬ್ಬಿಣದ ಅದಿರು ಗಣಿಗಳು ಮತ್ತು ಬಳ್ಳಾರಿ ಜಿಲ್ಲೆಯಲ್ಲಿನ ಗಣಿಗಳು ದಶಕಗಳ ಕಾಲ ವಿಐಎಸ್ಪಿಗೆ ಅದಿರು ಪೂರೈಸುವ ಸಾಮರ್ಥ್ಯ ಹೊಂದಿವೆ. 2022ರಲ್ಲಿ ನಡೆದಿದ್ದ ವಿಐಎಸ್ಪಿಯ ಷೇರು ವಿಕ್ರಯಕ್ಕೆ ಬಿಡ್ದಾರರ ನಿರಾಸಕ್ತಿ ಫಲವಾಗಿ ಹಿನ್ನಡೆ ಉಂಟಾಗಿದೆ. ಈ ಕಾರಣಕ್ಕೆ ಈ ಘಟಕ ಮುಚ್ಚುವ ಸಾಧ್ಯತೆ ಬಗ್ಗೆ ಕಾರ್ಮಿಕರ ಸಂಘಟನೆಯು ತೀವ್ರ ಕಳವಳ ವ್ಯಕ್ತಪಡಿಸಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.