‘ಒಂದು ದೇಶ ಒಂದು ತೆರಿಗೆ ಮಾದರಿಯಲ್ಲಿ, ಒಂದು ದೇಶ ಒಂದು ಶಿಕ್ಷಣ ನಮ್ಮಲ್ಲಿಲ್ಲ. ಶಿಕ್ಷಣ ವ್ಯವಸ್ಥೆ ಈ ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗತಿಯ ಪ್ರತಿಬಿಂಬದಂತಿದೆ. ಶ್ರೀಮಂತರಿಗೆ, ಬಡವರಿಗೆ ಭಿನ್ನವಾಗಿ ಶಿಕ್ಷಣ ದೊರೆಯುತ್ತಿದೆ. ಹೀಗಾಗಿ ಗ್ರಾಮೀಣ ಮಕ್ಕಳು ಹಿಂದುಳಿಯಬಾರದು ಎನ್ನುವ ಕಾರಣಕ್ಕೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸುವ ಆಲೋಚನೆಯಷ್ಟೇ ಸರ್ಕಾರಕ್ಕಿದೆ. ಕನ್ನಡ ಶಾಲೆಗಳನ್ನು ಮುಚ್ಚಿ, ಆಂಗ್ಲ ಮಾಧ್ಯಮ ಮಾಡುವ ಉದ್ದೇಶವಿಲ್ಲ’ ಎಂದು ಸ್ಪಷ್ಟಪಡಿಸಿದರು.