‘2023ರ ಮಾರ್ಚ್ 30ರಂದು ಚುನಾವಣಾ ಆಯೋಗಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಲ್ಲಿಸಿರುವ ಲೆಕ್ಕಪರಿಶೋಧನಾ ವರದಿ ಪ್ರಕಾರ ಆ ಪಕ್ಷದಲ್ಲಿರುವ ಮೊತ್ತ ₹ 1,320 ಮಾತ್ರ. ಗಣಿ ಖ್ಯಾತಿ ಜನಾರ್ದನ ರೆಡ್ಡಿ ಅವರು ಬೇನಾಮಿ ಹೆಸರಲ್ಲಿ ಪಕ್ಷ ಹುಟ್ಟು ಹಾಕಿ, ಈಗ ಬಿಜೆಪಿ ಜತೆ ವಿಲೀನಗೊಳಿಸಿದ್ದಾರೆ. ಈ ವಿಚಾರದಲ್ಲೂ ರೆಡ್ಡಿ ಬೇನಾಮಿ ವ್ಯವಹಾರ ನಡೆಸಿರುವುದು ಸ್ಪಷ್ಟವಾಗಿದೆ’ ಎಂದರು.