<p><strong>ಕೊಪ್ಪಳ</strong>: ‘ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ನಡುವಿನ ಗುದ್ದಾಟ ಆಂತರಿಕ ವಿಚಾರವಾಗಿದ್ದು, ಇಬ್ಬರೂ ಕಾಂಗ್ರೆಸ್ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ಖಾನ್ ಆರೋಪಿಸಿದರು.</p><p>ಕೊಪ್ಪಳ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬರುವ ಹಾಗೆ ಕಾಣುತ್ತಿಲ್ಲ. ಆದರೆ ನಮ್ಮ ಪಕ್ಷದ ಹೆಸರಿನಲ್ಲಿ ಬಿಜೆಪಿಯಲ್ಲಿ ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಟಕ ಮಾಡುತ್ತಿದ್ದಾರೆ ಎನಿಸುತ್ತಿದೆ’ ಎಂದರು.</p><p>‘ಸಿದ್ದರಾಮಯ್ಯ ಅವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿದ್ದೇವೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಕೈಗೊಳ್ಳುವೆ’ ಎಂದು ಸವಾಲು ಹಾಕಿದರು.</p><p>‘ನಾನು ಎಂದೂ ಜಾತಿ ಮಾಡಿಲ್ಲ. ನನ್ನ ಮಕ್ಕಳು ,ಮೊಮ್ಮಕ್ಕಳ ಮೇಲೆ ಆಣೆ ಮಾಡಿ ಹೇಳುವೆ. ಜಾತಿ ಮಾಡಿದರೆ ನಿರ್ನಾಮವಾಗುತ್ತೇನೆ. ಅದರ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ. ಬಡವರ ಸೇವೆಗಾಗಿಯೇ ರಾಜಕೀಯದಲ್ಲಿದ್ದೇನೆ. ಜಾತಿ ಮಾಡುವವರು ಯಾರೂ ರಾಜಕೀಯಕ್ಕೆ ಬರಬೇಡಿ’ ಎಂದು ಸಲಹೆ ನೀಡಿದರು.</p>.ಜನಾರ್ದನ ರೆಡ್ಡಿ vs ಶ್ರೀರಾಮುಲು | ‘ಮಾಜಿ’ ಗೆಳೆಯರ ‘ಸವಾಲ್–ಜವಾಬ್’.ಸತೀಶ ಜಾರಕಿಹೊಳಿಯನ್ನು ಮಣಿಸಲು ರಾಮುಲುಗೆ ಡಿಕೆಶಿ ಆಹ್ವಾನ: ಜನಾರ್ದನ ರೆಡ್ಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ನಡುವಿನ ಗುದ್ದಾಟ ಆಂತರಿಕ ವಿಚಾರವಾಗಿದ್ದು, ಇಬ್ಬರೂ ಕಾಂಗ್ರೆಸ್ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ಖಾನ್ ಆರೋಪಿಸಿದರು.</p><p>ಕೊಪ್ಪಳ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬರುವ ಹಾಗೆ ಕಾಣುತ್ತಿಲ್ಲ. ಆದರೆ ನಮ್ಮ ಪಕ್ಷದ ಹೆಸರಿನಲ್ಲಿ ಬಿಜೆಪಿಯಲ್ಲಿ ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಟಕ ಮಾಡುತ್ತಿದ್ದಾರೆ ಎನಿಸುತ್ತಿದೆ’ ಎಂದರು.</p><p>‘ಸಿದ್ದರಾಮಯ್ಯ ಅವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿದ್ದೇವೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಕೈಗೊಳ್ಳುವೆ’ ಎಂದು ಸವಾಲು ಹಾಕಿದರು.</p><p>‘ನಾನು ಎಂದೂ ಜಾತಿ ಮಾಡಿಲ್ಲ. ನನ್ನ ಮಕ್ಕಳು ,ಮೊಮ್ಮಕ್ಕಳ ಮೇಲೆ ಆಣೆ ಮಾಡಿ ಹೇಳುವೆ. ಜಾತಿ ಮಾಡಿದರೆ ನಿರ್ನಾಮವಾಗುತ್ತೇನೆ. ಅದರ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ. ಬಡವರ ಸೇವೆಗಾಗಿಯೇ ರಾಜಕೀಯದಲ್ಲಿದ್ದೇನೆ. ಜಾತಿ ಮಾಡುವವರು ಯಾರೂ ರಾಜಕೀಯಕ್ಕೆ ಬರಬೇಡಿ’ ಎಂದು ಸಲಹೆ ನೀಡಿದರು.</p>.ಜನಾರ್ದನ ರೆಡ್ಡಿ vs ಶ್ರೀರಾಮುಲು | ‘ಮಾಜಿ’ ಗೆಳೆಯರ ‘ಸವಾಲ್–ಜವಾಬ್’.ಸತೀಶ ಜಾರಕಿಹೊಳಿಯನ್ನು ಮಣಿಸಲು ರಾಮುಲುಗೆ ಡಿಕೆಶಿ ಆಹ್ವಾನ: ಜನಾರ್ದನ ರೆಡ್ಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>