<p><strong>ಬೆಂಗಳೂರು:</strong> ‘ಸಾಲಗಾರರ ಆದಾಯ ತೆರಿಗೆ ಪಾವತಿ ಬಾಕಿಯಿದೆ ಎಂಬ ಕಾರಣ ನೀಡಿ ಅವರ ಆಸ್ತಿಯನ್ನು ಹರಾಜು ಮೂಲಕ ಖರೀದಿ ಮಾಡಿದವರಿಗೆ ನೋಂದಣಿ ಮಾಡುವುದನ್ನು ನಿರಾಕರಿಸುವಂತಿಲ್ಲ’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.</p>.<p>‘ಬ್ಯಾಂಕ್ನ ಹರಾಜಿನ ಮೂಲಕ ಜಮೀನು ಖರೀದಿಸಿದ್ದನ್ನು ನನ್ನ ಹೆಸರಿಗೆ ನೋಂದಣಿ ಮಾಡಿಕೊಟ್ಟಿಲ್ಲ’ ಎಂದು ಜೆ.ಪಿ.ನಗರದ ಉಪ ನೋಂದಣಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಬಸವನಗುಡಿಯ ಟಿ.ಭರತ್ ಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು ಈ ಕುರಿತಂತೆ ಆದೇಶಿಸಿದೆ.</p>.<p>‘ಉಪ ನೋಂದಣಿ ನಿಯಮ 171ರ ಅಡಿಯಲ್ಲಿ ಯಾವುದೇ ಉಲ್ಲಂಘನೆ ಆಗಿದ್ದಲ್ಲಿ ಮಾತ್ರವೇ ನೋಂದಣಿಗೆ ತಡೆ ಹಿಡಿಯಬೇಕು. ಇಲ್ಲವಾದಲ್ಲಿ ಸಬ್ ರಿಜಿಸ್ಟ್ರಾರ್ ಅವರಿಗೆ ನೋಂದಣಿ ನಿರಾಕರಿಸುವ ಅಧಿಕಾರ ಇಲ್ಲ. ಆದ್ದರಿಂದ, ಬಿಡ್ದಾರರ ಹೆಸರಿಗೆ ತಕ್ಷಣವೇ ಪ್ರಸ್ತಾವಿತ ಜಮೀನನ್ನು ನೋಂದಣಿ ಮಾಡಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ನೋಂದಣಿ ಕಾಯ್ದೆ ಮತ್ತು ರಾಜ್ಯ ಸರ್ಕಾರ ರೂಪಿಸಿರುವ ನೋಂದಣಿ ನಿಯಮಗಳ ಅನ್ವಯದಡಿ ಮಾತ್ರವೇ ಉಪ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಈ ಕುರಿತಂತೆ ಸಂಬಂಧಿಸಿದ ನೋಂದಣಿ ನಿಯಮಗಳ ಸುತ್ತೋಲೆ ಹೊರಡಿಸಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಲಗಾರರ ಆದಾಯ ತೆರಿಗೆ ಪಾವತಿ ಬಾಕಿಯಿದೆ ಎಂಬ ಕಾರಣ ನೀಡಿ ಅವರ ಆಸ್ತಿಯನ್ನು ಹರಾಜು ಮೂಲಕ ಖರೀದಿ ಮಾಡಿದವರಿಗೆ ನೋಂದಣಿ ಮಾಡುವುದನ್ನು ನಿರಾಕರಿಸುವಂತಿಲ್ಲ’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.</p>.<p>‘ಬ್ಯಾಂಕ್ನ ಹರಾಜಿನ ಮೂಲಕ ಜಮೀನು ಖರೀದಿಸಿದ್ದನ್ನು ನನ್ನ ಹೆಸರಿಗೆ ನೋಂದಣಿ ಮಾಡಿಕೊಟ್ಟಿಲ್ಲ’ ಎಂದು ಜೆ.ಪಿ.ನಗರದ ಉಪ ನೋಂದಣಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಬಸವನಗುಡಿಯ ಟಿ.ಭರತ್ ಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು ಈ ಕುರಿತಂತೆ ಆದೇಶಿಸಿದೆ.</p>.<p>‘ಉಪ ನೋಂದಣಿ ನಿಯಮ 171ರ ಅಡಿಯಲ್ಲಿ ಯಾವುದೇ ಉಲ್ಲಂಘನೆ ಆಗಿದ್ದಲ್ಲಿ ಮಾತ್ರವೇ ನೋಂದಣಿಗೆ ತಡೆ ಹಿಡಿಯಬೇಕು. ಇಲ್ಲವಾದಲ್ಲಿ ಸಬ್ ರಿಜಿಸ್ಟ್ರಾರ್ ಅವರಿಗೆ ನೋಂದಣಿ ನಿರಾಕರಿಸುವ ಅಧಿಕಾರ ಇಲ್ಲ. ಆದ್ದರಿಂದ, ಬಿಡ್ದಾರರ ಹೆಸರಿಗೆ ತಕ್ಷಣವೇ ಪ್ರಸ್ತಾವಿತ ಜಮೀನನ್ನು ನೋಂದಣಿ ಮಾಡಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ನೋಂದಣಿ ಕಾಯ್ದೆ ಮತ್ತು ರಾಜ್ಯ ಸರ್ಕಾರ ರೂಪಿಸಿರುವ ನೋಂದಣಿ ನಿಯಮಗಳ ಅನ್ವಯದಡಿ ಮಾತ್ರವೇ ಉಪ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಈ ಕುರಿತಂತೆ ಸಂಬಂಧಿಸಿದ ನೋಂದಣಿ ನಿಯಮಗಳ ಸುತ್ತೋಲೆ ಹೊರಡಿಸಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>