ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರದ ಮುಂಬೈ ಮೊದಲಾದ ಕಡೆಗಳಿಂದ ಬಂದಿದ್ದ ವಲಸೆ ಕಾರ್ಮಿಕರನ್ನು ಸರ್ಕಾರಿ ಹಾಸ್ಟೆಲ್, ವಸತಿ ಶಾಲೆಗಳು ಮೊದಲಾದ ಕಡೆಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಅವರನ್ನು ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ದಿಢೀರನೆ ಬಿಡುಗಡೆ ಮಾಡಿದ್ದಾರೆ. ಇದರಿಂದ ದೊಡ್ಡ ಯಡವಟ್ಟಾಗಿದೆ. ಹೀಗೆ ಬಿಡುಗಡೆಯಾದ ಕೆಲವರಿಗೆ ಕೊರೊನಾ ಪಾಸಿಟಿವ್ ಇರುವುದು ಬಳಿಕ ಗೊತ್ತಾಗುತ್ತಿದೆ. ಹೀಗಾಗಿ, ಸಂಪೂರ್ಣ ವರದಿ ಬರುವವರೆಗೆ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರನ್ನು ಇರಿಸಿಕೊಳ್ಳಬೇಕು’ ಎಂದು ಹೇಳಿದರು.