<p><strong>ಬೆಂಗಳೂರು</strong>: ‘ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ತಮ್ಮನ ಮಗನ ಸಾವಿನ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ರೇಣುಕಾಚಾರ್ಯ ತಮ್ಮನ ಮಗನ ಕಾರು ನಾಲೆಯಲ್ಲಿ ಸಿಕ್ಕಿದೆ. ಆ ಕಾರಿನಲ್ಲಿ ಅವರ ಶವ ಪತ್ತೆಯಾಗಿದೆ. ಅಲ್ಲಿಂದ ಇನ್ನೂ ವರದಿ ಬರಬೇಕಿದೆ. ಇಲಾಖೆಗೆ ಈ ಬಗ್ಗೆ ಸದ್ಯ ಯಾವುದೇ ಅನುಮಾನ ಇಲ್ಲ. ತನಿಖೆಯಿಂದ ಸತ್ಯ ಹೊರ ಬರಬೇಕಾಗಿದೆ. ಏನಾಗಿದೆ, ಹೇಗೆ ಆಗಿದೆ ಎಂಬುದು ಕೆಲವೇ ಹೊತ್ತಿನಲ್ಲಿ ಗೊತ್ತಾಗಲಿದೆ’ ಎಂದರು.</p>.<p>‘ಅ. 31ರಂದು ರಾತ್ರಿ ನಾಪತ್ತೆಯಾಗಿದ್ದರು. ಎಲ್ಲ ಠಾಣೆಗಳಿಗೂ ಎಚ್ಚರಿಕೆ ನೀಡಲಾಗಿತ್ತು. ಸಿಸಿಟಿವಿ ಕ್ಯಾಮೆರಾಗಳನ್ನೂ ಪರಿಶೀಲಿಸಲಾಗುತ್ತಿದೆ. ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸುತ್ತೇವೆ’ ಎಂದರು.</p>.<p>ವಯೋಮಿತಿ ವಿನಾಯಿತಿ: ‘2022-23ನೇ ಸಾಲಿನಲ್ಲಿ ಐದು ಸಾವಿರ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಹುದ್ದೆ ಆಕಾಂಕ್ಷಿಗಳಿಗೆ ವಯೋಮಿತಿಯಲ್ಲಿ ಎರಡು ವರ್ಷಗಳ ವಿನಾಯಿತಿ ನೀಡಬೇಕೆಂಬ ಒತ್ತಡ ಇತ್ತು. ಶಾಸಕರು, ಮಂತ್ರಿಗಳಿಂದ ನಿರಂತರ ಒತ್ತಡ ಇತ್ತು. ಹೀಗಾಗಿ, ಎರಡು ವರ್ಷಗಳ ವಯೋಮಿತಿ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ತಮ್ಮನ ಮಗನ ಸಾವಿನ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ರೇಣುಕಾಚಾರ್ಯ ತಮ್ಮನ ಮಗನ ಕಾರು ನಾಲೆಯಲ್ಲಿ ಸಿಕ್ಕಿದೆ. ಆ ಕಾರಿನಲ್ಲಿ ಅವರ ಶವ ಪತ್ತೆಯಾಗಿದೆ. ಅಲ್ಲಿಂದ ಇನ್ನೂ ವರದಿ ಬರಬೇಕಿದೆ. ಇಲಾಖೆಗೆ ಈ ಬಗ್ಗೆ ಸದ್ಯ ಯಾವುದೇ ಅನುಮಾನ ಇಲ್ಲ. ತನಿಖೆಯಿಂದ ಸತ್ಯ ಹೊರ ಬರಬೇಕಾಗಿದೆ. ಏನಾಗಿದೆ, ಹೇಗೆ ಆಗಿದೆ ಎಂಬುದು ಕೆಲವೇ ಹೊತ್ತಿನಲ್ಲಿ ಗೊತ್ತಾಗಲಿದೆ’ ಎಂದರು.</p>.<p>‘ಅ. 31ರಂದು ರಾತ್ರಿ ನಾಪತ್ತೆಯಾಗಿದ್ದರು. ಎಲ್ಲ ಠಾಣೆಗಳಿಗೂ ಎಚ್ಚರಿಕೆ ನೀಡಲಾಗಿತ್ತು. ಸಿಸಿಟಿವಿ ಕ್ಯಾಮೆರಾಗಳನ್ನೂ ಪರಿಶೀಲಿಸಲಾಗುತ್ತಿದೆ. ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸುತ್ತೇವೆ’ ಎಂದರು.</p>.<p>ವಯೋಮಿತಿ ವಿನಾಯಿತಿ: ‘2022-23ನೇ ಸಾಲಿನಲ್ಲಿ ಐದು ಸಾವಿರ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಹುದ್ದೆ ಆಕಾಂಕ್ಷಿಗಳಿಗೆ ವಯೋಮಿತಿಯಲ್ಲಿ ಎರಡು ವರ್ಷಗಳ ವಿನಾಯಿತಿ ನೀಡಬೇಕೆಂಬ ಒತ್ತಡ ಇತ್ತು. ಶಾಸಕರು, ಮಂತ್ರಿಗಳಿಂದ ನಿರಂತರ ಒತ್ತಡ ಇತ್ತು. ಹೀಗಾಗಿ, ಎರಡು ವರ್ಷಗಳ ವಯೋಮಿತಿ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>