ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ರೇಣುಕಾಚಾರ್ಯ ತಮ್ಮನ ಮಗನ ಕಾರು ನಾಲೆಯಲ್ಲಿ ಸಿಕ್ಕಿದೆ. ಆ ಕಾರಿನಲ್ಲಿ ಅವರ ಶವ ಪತ್ತೆಯಾಗಿದೆ. ಅಲ್ಲಿಂದ ಇನ್ನೂ ವರದಿ ಬರಬೇಕಿದೆ. ಇಲಾಖೆಗೆ ಈ ಬಗ್ಗೆ ಸದ್ಯ ಯಾವುದೇ ಅನುಮಾನ ಇಲ್ಲ. ತನಿಖೆಯಿಂದ ಸತ್ಯ ಹೊರ ಬರಬೇಕಾಗಿದೆ. ಏನಾಗಿದೆ, ಹೇಗೆ ಆಗಿದೆ ಎಂಬುದು ಕೆಲವೇ ಹೊತ್ತಿನಲ್ಲಿ ಗೊತ್ತಾಗಲಿದೆ’ ಎಂದರು.