<p><strong>ಬೆಂಗಳೂರು:</strong> ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ (ಜ. 26) ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ಅವಕಾಶ ನೀಡಲಾಗಿದೆ.</p>.<p>‘ಪರೇಡ್ನಲ್ಲಿ ಭಾಗವಹಿಸಲು ಸಿದ್ಧಪಡಿಸಿದ ಅಂತಿಮ ಪಟ್ಟಿಯಲ್ಲಿ ಕರ್ನಾಟಕ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನೂ ಪರಿಗಣಿಸಲಾಗಿದೆ’ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ರಕ್ಷಣಾ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಹೀಗಾಗಿ, ಈ ಬಾರಿ ರಾಜ್ಯದಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿ ಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಸ್ತಬ್ಥಚಿತ್ರ ಪರೇಡ್ನಲ್ಲಿ ಭಾಗವಹಿಸಲಿದೆ.</p>.<p>ಮೊದಲ ನಾಲ್ಕು ಸಭೆಗಳಲ್ಲಿ ಆಯ್ಕೆಯಾಗಿದ್ದ ಕರ್ನಾಟಕದ ಸ್ತಬ್ಧಚಿತ್ರ, ಡಿ. 28ರಂದು ನಡೆದಿದ್ದ ಐದನೇ ಸುತ್ತಿನ ಸಭೆಯ ಪಟ್ಟಿಯಲ್ಲಿ ಸೇರ್ಪಡೆ ಆಗಿರಲಿಲ್ಲ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧಚಿತ್ರವನ್ನು ಕೈಬಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ತಕ್ಷಣ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿಯೂ ಅವಕಾಶ ಕೊಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತುಕತೆ ನಡೆಸಿದ್ದಾರೆಂದು ತಿಳಿಸಿದ್ದರು.</p>.<p>ಕರ್ನಾಟಕವು 2022ರಲ್ಲಿ ಪ್ರಸ್ತುತಪಡಿಸಿದ್ದ ‘ಸಾಂಪ್ರದಾಯಿಕ ಕಸೂತಿಯ ತೊಟ್ಟಿಲು’ ಸ್ತಬ್ಧಚಿತ್ರಕ್ಕೆ ಎರಡನೇ ಅತ್ಯುತ್ತಮ ಪ್ರಶಸ್ತಿ ಸಂದಿತ್ತು. ಉತ್ತರ ಪ್ರದೇಶಕ್ಕೆ ಪ್ರಥಮ ಮತ್ತು ಮೇಘಾಲಯಕ್ಕೆ ಮೂರನೇ ಪ್ರಶಸ್ತಿ ಬಂದಿತ್ತು. ಈ ಬಾರಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಬೇಕೆಂಬ ಕಾರಣಕ್ಕೆ ಈ ಮೂರು ರಾಜ್ಯಗಳನ್ನು ಅಂತಿಮ ಸುತ್ತಿನಲ್ಲಿ ಹೊರಗಿಡಲಾಗಿದೆ ಎಂದು ಹೇಳಲಾಗಿತ್ತು.</p>.<p>ಇದೀಗ ಉತ್ತರಪ್ರದೇಶದ ಸ್ತಬ್ಧ ಚಿತ್ರಕ್ಕೂ ಅವಕಾಶ ನೀಡಲಾಗಿದೆ. ಮೇಘಾಲಯದ ಬದಲು ತ್ರಿಪುರಾ ರಾಜ್ಯಕ್ಕೆ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ (ಜ. 26) ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ಅವಕಾಶ ನೀಡಲಾಗಿದೆ.</p>.<p>‘ಪರೇಡ್ನಲ್ಲಿ ಭಾಗವಹಿಸಲು ಸಿದ್ಧಪಡಿಸಿದ ಅಂತಿಮ ಪಟ್ಟಿಯಲ್ಲಿ ಕರ್ನಾಟಕ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನೂ ಪರಿಗಣಿಸಲಾಗಿದೆ’ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ರಕ್ಷಣಾ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಹೀಗಾಗಿ, ಈ ಬಾರಿ ರಾಜ್ಯದಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿ ಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಸ್ತಬ್ಥಚಿತ್ರ ಪರೇಡ್ನಲ್ಲಿ ಭಾಗವಹಿಸಲಿದೆ.</p>.<p>ಮೊದಲ ನಾಲ್ಕು ಸಭೆಗಳಲ್ಲಿ ಆಯ್ಕೆಯಾಗಿದ್ದ ಕರ್ನಾಟಕದ ಸ್ತಬ್ಧಚಿತ್ರ, ಡಿ. 28ರಂದು ನಡೆದಿದ್ದ ಐದನೇ ಸುತ್ತಿನ ಸಭೆಯ ಪಟ್ಟಿಯಲ್ಲಿ ಸೇರ್ಪಡೆ ಆಗಿರಲಿಲ್ಲ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧಚಿತ್ರವನ್ನು ಕೈಬಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ತಕ್ಷಣ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿಯೂ ಅವಕಾಶ ಕೊಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತುಕತೆ ನಡೆಸಿದ್ದಾರೆಂದು ತಿಳಿಸಿದ್ದರು.</p>.<p>ಕರ್ನಾಟಕವು 2022ರಲ್ಲಿ ಪ್ರಸ್ತುತಪಡಿಸಿದ್ದ ‘ಸಾಂಪ್ರದಾಯಿಕ ಕಸೂತಿಯ ತೊಟ್ಟಿಲು’ ಸ್ತಬ್ಧಚಿತ್ರಕ್ಕೆ ಎರಡನೇ ಅತ್ಯುತ್ತಮ ಪ್ರಶಸ್ತಿ ಸಂದಿತ್ತು. ಉತ್ತರ ಪ್ರದೇಶಕ್ಕೆ ಪ್ರಥಮ ಮತ್ತು ಮೇಘಾಲಯಕ್ಕೆ ಮೂರನೇ ಪ್ರಶಸ್ತಿ ಬಂದಿತ್ತು. ಈ ಬಾರಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಬೇಕೆಂಬ ಕಾರಣಕ್ಕೆ ಈ ಮೂರು ರಾಜ್ಯಗಳನ್ನು ಅಂತಿಮ ಸುತ್ತಿನಲ್ಲಿ ಹೊರಗಿಡಲಾಗಿದೆ ಎಂದು ಹೇಳಲಾಗಿತ್ತು.</p>.<p>ಇದೀಗ ಉತ್ತರಪ್ರದೇಶದ ಸ್ತಬ್ಧ ಚಿತ್ರಕ್ಕೂ ಅವಕಾಶ ನೀಡಲಾಗಿದೆ. ಮೇಘಾಲಯದ ಬದಲು ತ್ರಿಪುರಾ ರಾಜ್ಯಕ್ಕೆ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>