<p><strong>ಬೆಂಗಳೂರು:</strong> 'ನರೇಗಾ ಉಳಿಸುವ ಸಲುವಾಗಿ ಮಂಗಳವಾರ ( ಜ.27) ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಸುದ್ದಿಗಾರರ ಜೊತೆ ಸೋಮವಾರ ಮತನಾಡಿದ ಅವರು, '20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ, ಸಾಂವಿಧಾನಿಕ ಹಕ್ಕಾಗಿ ಬಂದಿರುವ ನರೇಗಾವನ್ನು ನಾಶ ಮಾಡಲು ಬಿಜೆಪಿ ಹೊರಟಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ, ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ದೇಶದ ಉದ್ದಗಲಕ್ಕೂ ಹೋರಾಟ ರೂಪಿಸಲಾಗಿದೆ' ಎಂದರು.</p><p>'ಪ್ರತಿವರ್ಷ ₹ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ' ಎಂದರು.</p><p>'ನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು' ಎಂದರು.</p><p>ನರೇಗಾ ಬದಲಾವಣೆ ಬಗ್ಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, "ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಬಾಯಿ ಬಿಡುತ್ತಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಹೊಸ ಕಾಯ್ದೆಯ ಅನುಷ್ಠಾನ ಅಸಾಧ್ಯ' ಎಂದರು.</p><p>'ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ' ಎಂದರು.</p><p>'2028ಕ್ಕೆ ಮುಖ್ಯಮಂತ್ರಿಯಾಗುತ್ತೇನೆ' ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನಾಡುವುದು, ಆ ವಿಚಾರ ಬೇಡ ಬಿಡಿ' ಎಂದರು.</p><p><strong>ನಮ್ಮ ಸೇವೆ ಕುಟುಂಬಕ್ಕಾಗಿ ಅಲ್ಲ:</strong> 'ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ' ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ, 'ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿ ಅಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ' ಎಂದರು.</p><p>ಹಾಸನ ಜಿಡಿಎಸ್ ಸಮಾವೇಶದ ಉದ್ದಕ್ಕೂ ತಮ್ಮನ್ನು ನೆನಪಿಸಿಕೊಂಡಿದ್ದರ ಬಗ್ಗೆ ಕೇಳಿದಾಗ, 'ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಶಕ್ತಿ ಬರುವುದಿಲ್ಲ, ಜೀವ ಬರುವುದಿಲ್ಲ, ಧೈರ್ಯ ಬರುವುದಿಲ್ಲ. ಅದಕ್ಕೆ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದರು.</p><p>ಮನೆಗೆ ನುಗ್ಗಿ ಬಂಧಿಸಲಾಯಿತು ಎನ್ನುವ ದೇವೆಗೌಡರ ಹೇಳಿಕೆ ಬಗ್ಗೆ ಕೇಳಿದಾಗ, 'ಈ ದೇಶದಲ್ಲಿ ಏನೇನು ಕಾನೂನು ಇದೆಯೋ ಅದೆಲ್ಲವೂ ಎಲ್ಲರಿಗೂ ಒಂದೇ. ಯಾರಿಗೆ ಏನೇನು ಕಾನೂನು ಮಾಡಬೇಕು ಅನ್ನೋದಕ್ಕೆ ನೀವೇ ಉತ್ತರ ನೀಡಬೇಕು' ಎಂದು ಹೇಳಿದರು.</p><p>ತಮ್ಮ ಭಾಷಣದ ವೇಳೆ ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, 'ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ರಾಜ್ಯಪಾಲರು ಭಾಷಣ ಓದಿ, ರಾಷ್ಟ್ರಗೀತೆ ಆಗುವ ತನಕ ಇರಬಹುದಿತ್ತು. ರಾಜ್ಯಪಾಲರಿಗೆ ನರೇಗಾ ಬಗೆಗಿನ ಭಾಷಣ ಓದುವುದಕ್ಕೆ ಇಷ್ಟವಿಲ್ಲದಿದ್ದರೆ ಹಾಗೆ ಇರಬಹುದಿತ್ತು. ಜತೆಗೆ ಸಾಕಷ್ಟು ಬೇರೆ ಅವಕಾಶಗಳೂ ಇದ್ದವು. ರಾಜ್ಯಪಾಲರು ಸರ್ಕಾರ ನೀಡಿದ ಭಾಷಣ ಓದುವುದು ಸಂವಿಧಾನ ರಕ್ಷಣೆಯ ಕರ್ತವ್ಯ. ನಮ್ಮಲ್ಲಿ ಅಲ್ಲದೇ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ನರೇಗಾ ಉಳಿಸುವ ಸಲುವಾಗಿ ಮಂಗಳವಾರ ( ಜ.27) ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಸುದ್ದಿಗಾರರ ಜೊತೆ ಸೋಮವಾರ ಮತನಾಡಿದ ಅವರು, '20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ, ಸಾಂವಿಧಾನಿಕ ಹಕ್ಕಾಗಿ ಬಂದಿರುವ ನರೇಗಾವನ್ನು ನಾಶ ಮಾಡಲು ಬಿಜೆಪಿ ಹೊರಟಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ, ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ದೇಶದ ಉದ್ದಗಲಕ್ಕೂ ಹೋರಾಟ ರೂಪಿಸಲಾಗಿದೆ' ಎಂದರು.</p><p>'ಪ್ರತಿವರ್ಷ ₹ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ' ಎಂದರು.</p><p>'ನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು' ಎಂದರು.</p><p>ನರೇಗಾ ಬದಲಾವಣೆ ಬಗ್ಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, "ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಬಾಯಿ ಬಿಡುತ್ತಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಹೊಸ ಕಾಯ್ದೆಯ ಅನುಷ್ಠಾನ ಅಸಾಧ್ಯ' ಎಂದರು.</p><p>'ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ' ಎಂದರು.</p><p>'2028ಕ್ಕೆ ಮುಖ್ಯಮಂತ್ರಿಯಾಗುತ್ತೇನೆ' ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನಾಡುವುದು, ಆ ವಿಚಾರ ಬೇಡ ಬಿಡಿ' ಎಂದರು.</p><p><strong>ನಮ್ಮ ಸೇವೆ ಕುಟುಂಬಕ್ಕಾಗಿ ಅಲ್ಲ:</strong> 'ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ' ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ, 'ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿ ಅಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ' ಎಂದರು.</p><p>ಹಾಸನ ಜಿಡಿಎಸ್ ಸಮಾವೇಶದ ಉದ್ದಕ್ಕೂ ತಮ್ಮನ್ನು ನೆನಪಿಸಿಕೊಂಡಿದ್ದರ ಬಗ್ಗೆ ಕೇಳಿದಾಗ, 'ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಶಕ್ತಿ ಬರುವುದಿಲ್ಲ, ಜೀವ ಬರುವುದಿಲ್ಲ, ಧೈರ್ಯ ಬರುವುದಿಲ್ಲ. ಅದಕ್ಕೆ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದರು.</p><p>ಮನೆಗೆ ನುಗ್ಗಿ ಬಂಧಿಸಲಾಯಿತು ಎನ್ನುವ ದೇವೆಗೌಡರ ಹೇಳಿಕೆ ಬಗ್ಗೆ ಕೇಳಿದಾಗ, 'ಈ ದೇಶದಲ್ಲಿ ಏನೇನು ಕಾನೂನು ಇದೆಯೋ ಅದೆಲ್ಲವೂ ಎಲ್ಲರಿಗೂ ಒಂದೇ. ಯಾರಿಗೆ ಏನೇನು ಕಾನೂನು ಮಾಡಬೇಕು ಅನ್ನೋದಕ್ಕೆ ನೀವೇ ಉತ್ತರ ನೀಡಬೇಕು' ಎಂದು ಹೇಳಿದರು.</p><p>ತಮ್ಮ ಭಾಷಣದ ವೇಳೆ ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, 'ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ರಾಜ್ಯಪಾಲರು ಭಾಷಣ ಓದಿ, ರಾಷ್ಟ್ರಗೀತೆ ಆಗುವ ತನಕ ಇರಬಹುದಿತ್ತು. ರಾಜ್ಯಪಾಲರಿಗೆ ನರೇಗಾ ಬಗೆಗಿನ ಭಾಷಣ ಓದುವುದಕ್ಕೆ ಇಷ್ಟವಿಲ್ಲದಿದ್ದರೆ ಹಾಗೆ ಇರಬಹುದಿತ್ತು. ಜತೆಗೆ ಸಾಕಷ್ಟು ಬೇರೆ ಅವಕಾಶಗಳೂ ಇದ್ದವು. ರಾಜ್ಯಪಾಲರು ಸರ್ಕಾರ ನೀಡಿದ ಭಾಷಣ ಓದುವುದು ಸಂವಿಧಾನ ರಕ್ಷಣೆಯ ಕರ್ತವ್ಯ. ನಮ್ಮಲ್ಲಿ ಅಲ್ಲದೇ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>