<p><strong>ಬೆಂಗಳೂರು</strong>: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು.</p><p>ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸಿದ್ದರು. ಇದರಿಂದ ವಿವಾದ ಸೃಷ್ಟಿಯಾಗಿತ್ತು.</p><p>ರಾಜ್ಯಪಾಲರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು (ಸೋಮವಾರ) ನಡೆದ ಕಾರ್ಯಕ್ರಮದಲ್ಲಿ 24 ಪುಟಗಳ ಭಾಷಣ ಓದಿದರು. ಹಿಂದಿಯಲ್ಲಿ ಅವರು ಭಾಷಣ ಮಾಡಿದರು.</p><p>ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು.</p><p>20 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿದರು.</p><p><strong>ಧ್ವಜಾರೋಹಣ ನೆರವೇರಿಸಿದ ಗೆಹ್ಲೋಟ್</strong></p><p>ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. </p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.</p>.Republic Day 2026: ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭ.Republic Day 2026 LIVE: ಧ್ವಜಾರೋಹಣ ನೆರವೇರಿಸಿದ ಗೆಹಲೋತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು.</p><p>ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸಿದ್ದರು. ಇದರಿಂದ ವಿವಾದ ಸೃಷ್ಟಿಯಾಗಿತ್ತು.</p><p>ರಾಜ್ಯಪಾಲರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು (ಸೋಮವಾರ) ನಡೆದ ಕಾರ್ಯಕ್ರಮದಲ್ಲಿ 24 ಪುಟಗಳ ಭಾಷಣ ಓದಿದರು. ಹಿಂದಿಯಲ್ಲಿ ಅವರು ಭಾಷಣ ಮಾಡಿದರು.</p><p>ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು.</p><p>20 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿದರು.</p><p><strong>ಧ್ವಜಾರೋಹಣ ನೆರವೇರಿಸಿದ ಗೆಹ್ಲೋಟ್</strong></p><p>ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. </p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.</p>.Republic Day 2026: ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭ.Republic Day 2026 LIVE: ಧ್ವಜಾರೋಹಣ ನೆರವೇರಿಸಿದ ಗೆಹಲೋತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>