‘ಅರಣ್ಯ ಪ್ರದೇಶದಲ್ಲಿ ತೆಗೆದ ಅದಿರು ಸಾಗಣೆಗೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಇದು ಬೇರೆಡೆ ತೆಗೆದಿರುವ ಅದಿರು ಆಗಿರುವ ಕಾರಣ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿಲ್ಲ’ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ‘ಕರ್ನಾಟಕ ಅಕ್ರಮ ಗಣಿಗಾರಿಕೆ, ಸಾಗಣೆ, ದಾಸ್ತಾನು ನಿಯಮ–2011ರ ನಿಯಮ 3ರ ಪ್ರಕಾರ ಅನುಮತಿಯನ್ನು ಅಗತ್ಯವಾಗಿ ಪಡೆಯಲೇಬೇಕು’ ಎಂದು ಆದೇಶಿಸಿದೆ.