<p><strong>ಬೆಂಗಳೂರು</strong>: ‘ಕ್ರೈಸ್ತ ಮತ್ತು ಇಸ್ಲಾಂ ಧರ್ಮಗಳಿಗೆ ಮತಾಂತರವಾದ ದಲಿತರಿಗೂ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು. ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕಾನೂನು ರೂಪಿಸಬೇಕು’ ಎಂದು ಅಹಿಂದ ಚಳವಳಿ ಸಂಘಟನೆಯು ಒತ್ತಾಯಿಸಿದೆ.</p>.<p>ಸಂಘಟನೆಯ ಪರವಾಗಿ ಸಿ.ಎಂ.ಇಬ್ರಾಹಿಂ, ಮೊಹಿದ್ದೀನ್ ಬಾವ, ವಿಜಯಲಕ್ಷ್ಮಿ ಅರಸ್, ತನ್ವೀರ್ ಸೇಠ್ ಮತ್ತು ಐವನ್ ಡಿಸೋಜ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆರ್.ಮಧುಸೂಧನ ನಾಯಕ್ ಅವರನ್ನು ಬುಧವಾರ ಭೇಟಿ ಮಾಡಿ, ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.</p>.<p>‘ಬೌದ್ಧ ಮತ್ತು ಸಿಖ್ ಧರ್ಮಕ್ಕೆ ಮತಾಂತರವಾದ ದಲಿತರಿಗೆ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಈ ಸವಲತ್ತನ್ನು, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೂ ವಿಸ್ತರಿಸಬೇಕು. ಇದಕ್ಕಾಗಿ 1950ರ ರಾಷ್ಟ್ರಪತಿಯ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ರಾಜ್ಯ ವಿಧಾನಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಶಿಫಾರಸು ಮಾಡಬೇಕು’ ಎಂದು ಆಯೋಗವನ್ನು ಒತ್ತಾಯಿಸಿದ್ದಾರೆ.</p>.<p>‘ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಹಲ್ಲೆ– ದೌರ್ಜನ್ಯದ ಪ್ರಕರಣಗಳನ್ನು ತಡೆಯಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕಾನೂನು ರೂಪಿಸಬೇಕು. ಇಂತಹ ಪ್ರಕರಣಗಳ ದಾಖಲಾತಿ ಮತ್ತು ನಿರ್ವಹಣೆಗೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಬೇಕು’ ಎಂದು ಕೋರಿದೆ.</p>.<p>‘ಮುಸ್ಲಿಮರಿಗಾಗಿ ‘ಹಜ್ ಭವನ’ ನಿರ್ಮಿಸಿರುವಂತೆ ಕ್ರೈಸ್ತರಿಗೆ ‘ಕ್ರೈಸ್ತ ಭವನ’, ಜೈನರಿಗೆ ‘ಜೈನ ಭವನ’ ಸ್ಥಾಪಿಸಬೇಕು’ ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕ್ರೈಸ್ತ ಮತ್ತು ಇಸ್ಲಾಂ ಧರ್ಮಗಳಿಗೆ ಮತಾಂತರವಾದ ದಲಿತರಿಗೂ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು. ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕಾನೂನು ರೂಪಿಸಬೇಕು’ ಎಂದು ಅಹಿಂದ ಚಳವಳಿ ಸಂಘಟನೆಯು ಒತ್ತಾಯಿಸಿದೆ.</p>.<p>ಸಂಘಟನೆಯ ಪರವಾಗಿ ಸಿ.ಎಂ.ಇಬ್ರಾಹಿಂ, ಮೊಹಿದ್ದೀನ್ ಬಾವ, ವಿಜಯಲಕ್ಷ್ಮಿ ಅರಸ್, ತನ್ವೀರ್ ಸೇಠ್ ಮತ್ತು ಐವನ್ ಡಿಸೋಜ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆರ್.ಮಧುಸೂಧನ ನಾಯಕ್ ಅವರನ್ನು ಬುಧವಾರ ಭೇಟಿ ಮಾಡಿ, ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.</p>.<p>‘ಬೌದ್ಧ ಮತ್ತು ಸಿಖ್ ಧರ್ಮಕ್ಕೆ ಮತಾಂತರವಾದ ದಲಿತರಿಗೆ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಈ ಸವಲತ್ತನ್ನು, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೂ ವಿಸ್ತರಿಸಬೇಕು. ಇದಕ್ಕಾಗಿ 1950ರ ರಾಷ್ಟ್ರಪತಿಯ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ರಾಜ್ಯ ವಿಧಾನಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಶಿಫಾರಸು ಮಾಡಬೇಕು’ ಎಂದು ಆಯೋಗವನ್ನು ಒತ್ತಾಯಿಸಿದ್ದಾರೆ.</p>.<p>‘ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಹಲ್ಲೆ– ದೌರ್ಜನ್ಯದ ಪ್ರಕರಣಗಳನ್ನು ತಡೆಯಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕಾನೂನು ರೂಪಿಸಬೇಕು. ಇಂತಹ ಪ್ರಕರಣಗಳ ದಾಖಲಾತಿ ಮತ್ತು ನಿರ್ವಹಣೆಗೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಬೇಕು’ ಎಂದು ಕೋರಿದೆ.</p>.<p>‘ಮುಸ್ಲಿಮರಿಗಾಗಿ ‘ಹಜ್ ಭವನ’ ನಿರ್ಮಿಸಿರುವಂತೆ ಕ್ರೈಸ್ತರಿಗೆ ‘ಕ್ರೈಸ್ತ ಭವನ’, ಜೈನರಿಗೆ ‘ಜೈನ ಭವನ’ ಸ್ಥಾಪಿಸಬೇಕು’ ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>