<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಒಳಪಟ್ಟು ನೇಮಕಾತಿ ನಡೆಸುವ ಸಲುವಾಗಿ, 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ರದ್ದುಪಡಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.</p>.<p>ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇರ ನೇಮಕಾತಿ ಪ್ರಕ್ರಿಯೆ ನಡಸುವಂತೆಯೂ ಸೂಚಿಸಿದೆ.</p>.<p>2024ರ ಅಕ್ಟೋಬರ್ 28ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆ ದಿನಾಂಕದ ನಂತರ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದರೆ, ಅವುಗಳನ್ನೂ ರದ್ದುಪಡಿಸಬೇಕು ಎಂದು ರಾಜ್ಯ ಸರ್ಕಾರವು ಎಲ್ಲ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ.</p>.<p>ರದ್ದುಪಡಿಸಲಾದ ಎಲ್ಲ ನೇರ ನೇಮಕಾತಿಗಳಲ್ಲಿ, ಒಳಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿ. ಜತೆಗೆ ಕಾಲಬದ್ಧವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಎಂದು ಎಲ್ಲ ನೇಮಕಾತಿ ಪ್ರಾಧಿಕಾರಿಗಳು ಹಾಗೂ ಆಯ್ಕೆ ಪ್ರಾಧಿಕಾರಗಳಿಗೆ ಸರ್ಕಾರವು ಸೂಚಿಸಿದೆ.</p>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಒಳಪಟ್ಟು ನೇಮಕಾತಿ ನಡೆಸುವ ಸಲುವಾಗಿ, 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ರದ್ದುಪಡಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.</p>.<p>ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇರ ನೇಮಕಾತಿ ಪ್ರಕ್ರಿಯೆ ನಡಸುವಂತೆಯೂ ಸೂಚಿಸಿದೆ.</p>.<p>2024ರ ಅಕ್ಟೋಬರ್ 28ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆ ದಿನಾಂಕದ ನಂತರ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದರೆ, ಅವುಗಳನ್ನೂ ರದ್ದುಪಡಿಸಬೇಕು ಎಂದು ರಾಜ್ಯ ಸರ್ಕಾರವು ಎಲ್ಲ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ.</p>.<p>ರದ್ದುಪಡಿಸಲಾದ ಎಲ್ಲ ನೇರ ನೇಮಕಾತಿಗಳಲ್ಲಿ, ಒಳಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿ. ಜತೆಗೆ ಕಾಲಬದ್ಧವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಎಂದು ಎಲ್ಲ ನೇಮಕಾತಿ ಪ್ರಾಧಿಕಾರಿಗಳು ಹಾಗೂ ಆಯ್ಕೆ ಪ್ರಾಧಿಕಾರಗಳಿಗೆ ಸರ್ಕಾರವು ಸೂಚಿಸಿದೆ.</p>