ವಿಧಾನ ಪರಿಷತ್ತಿನಲ್ಲಿ ಗುರುವಾರ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಗರಿಕ ಸೇವಾ ನಿಯಮಗಳ ಅನ್ವಯ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ನಿರ್ದಿಷ್ಟ ಅವಧಿಗೆ ಸೀಮಿತವಾಗಿರುತ್ತದೆ. ನೇಮಕಾತಿ ವೇಳೆ ಪ್ರಭಾವಿಗಳಿಗೆ ಮಣೆ ಹಾಕಲಾಗುತ್ತಿದೆ, ತಳ ಸಮುದಾಯ ಕಡೆಗಣಿಸಲಾಗುತ್ತಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದರು.