<p><strong>ಬೆಂಗಳೂರು: </strong>ಲಾಕ್ಡೌನ್ ಘೋಷಣೆಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗಾರಿಕೆಗಳ ಸುಗಮ ಕಾರ್ಯಾಚರಣೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಚಿತ್ರ ‘ರೆಸಿಲಿಯಂಟ್ ಕರ್ನಾಟಕ’ವನ್ನು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಬುಧವಾರ ಬಿಡುಗಡೆ ಮಾಡಿದರು.</p>.<p>‘ಎಂಟು ತಿಂಗಳಿಂದ ಇಡೀ ಜಗತ್ತು ಬದಲಾಗಿದೆ. ಕೋವಿಡ್ ವಿರುದ್ಧದ ಹೋರಾಟದ ಜತೆಗೆ, ಆರ್ಥಿಕತೆಗೆ ಹೊಡೆತ ಬೀಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೋವಿಡ್ ಸಮಯದಲ್ಲಿ ಸಾರ್ವನಿಕರಿಗೆ ಅಗತ್ಯ ವಸ್ತುಗಳ ಕೊರತೆ ಆಗದಂತೆ ಎಚ್ಚರ ವಹಿಸಲಾಗಿತ್ತು. ಈ ಎಲ್ಲದನ್ನು ಚಿತ್ರ ಒಳಗೊಂಡಿದೆ’ ಎಂದು ಶೆಟ್ಟರ್ ವಿವರಿಸಿದರು.</p>.<p>‘ಲಾಕ್ಡೌನ್ ಅವಧಿಯಲ್ಲೂ ಉತ್ಪಾದನೆಗೆ ತೊಡಕಗಾದಂತೆ ಉದ್ಯಮಗಳಿಗೆ ಸಹಕಾರ ನೀಡಲಾಗಿತ್ತು. ಜನಜೀವನ ಹಾಗೂ ಆರ್ಥಿಕತೆ ನಡುವೆ ಸಮತೋಲನ ಕಾಯ್ದುಕೊಳ್ಳಲಾಗಿತ್ತು. ಕೈಗಾರಿಕೆಯ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯ ನಮ್ಮದು. ಹಲವು ವಲಯಗಳಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ’ ಎಂದರು.</p>.<p>‘ಹೂಡಿಕೆದಾರರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಹೊಸ ಕೈಗಾರಿಕಾ ನೀತಿ 2020-25 ರೂಪಿಸಿದೆ. ಜತೆಗೆ ಕಾರ್ಮಿಕ ಕಾನೂನಿನಲ್ಲಿ ತಂದಿರುವ ಸುಧಾರಣೆಗಳು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಹೊಸ ನೀತಿಯಲ್ಲಿರುವ ಅಂಶಗಳು ನೆರವಾಗಲಿವೆ’ ಎಂದರು.</p>.<p>ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ‘ಅಗತ್ಯ ವಸ್ತುಗಳ ಉತ್ಪಾದಿಸುವ ಕೈಗಾರಿಕೆಗಳಿಗೆ ಸರಬರಾಜು ಸರಪಳಿಯು ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ. ಕೋವಿಡ್ ಆರಂಭಿಕ ದಿನಗಳಲ್ಲೂ ರಾಜ್ಯ ಸರ್ಕಾರ ಏರೋಸ್ಪೇಸ್ ಮತ್ತು ರಕ್ಷಣಾ ಸಂಸ್ಥೆಗಳ ಕಾರ್ಯಾಚರಣೆಗೆ ಅಗತ್ಯ ಬೆಂಬಲ ಒದಗಿಸಿತ್ತು’ ಎಂದರು.</p>.<p>* ಆರ್ಥಿಕತೆ, ಕೈಗಾರಿಕೆ ಅಭಿವೃದ್ಧಿ ಉತ್ತೇಜಿಸಲು ಹೂಡಿಕೆ ಸ್ನೇಹಿ ನೀತಿ ಹಾಗೂ ಪೂರಕ ಸೌಲಭ್ಯಗಳನ್ನು ಒದಗಿಸಿ ಕಂಪನಿಗಳನ್ನು ಆಹ್ವಾನಿಸುತ್ತೇವೆ.</p>.<p>-ಜಗದೀಶ ಶೆಟ್ಟರ್, ಕೈಗಾರಿಕಾ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಾಕ್ಡೌನ್ ಘೋಷಣೆಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗಾರಿಕೆಗಳ ಸುಗಮ ಕಾರ್ಯಾಚರಣೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಚಿತ್ರ ‘ರೆಸಿಲಿಯಂಟ್ ಕರ್ನಾಟಕ’ವನ್ನು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಬುಧವಾರ ಬಿಡುಗಡೆ ಮಾಡಿದರು.</p>.<p>‘ಎಂಟು ತಿಂಗಳಿಂದ ಇಡೀ ಜಗತ್ತು ಬದಲಾಗಿದೆ. ಕೋವಿಡ್ ವಿರುದ್ಧದ ಹೋರಾಟದ ಜತೆಗೆ, ಆರ್ಥಿಕತೆಗೆ ಹೊಡೆತ ಬೀಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೋವಿಡ್ ಸಮಯದಲ್ಲಿ ಸಾರ್ವನಿಕರಿಗೆ ಅಗತ್ಯ ವಸ್ತುಗಳ ಕೊರತೆ ಆಗದಂತೆ ಎಚ್ಚರ ವಹಿಸಲಾಗಿತ್ತು. ಈ ಎಲ್ಲದನ್ನು ಚಿತ್ರ ಒಳಗೊಂಡಿದೆ’ ಎಂದು ಶೆಟ್ಟರ್ ವಿವರಿಸಿದರು.</p>.<p>‘ಲಾಕ್ಡೌನ್ ಅವಧಿಯಲ್ಲೂ ಉತ್ಪಾದನೆಗೆ ತೊಡಕಗಾದಂತೆ ಉದ್ಯಮಗಳಿಗೆ ಸಹಕಾರ ನೀಡಲಾಗಿತ್ತು. ಜನಜೀವನ ಹಾಗೂ ಆರ್ಥಿಕತೆ ನಡುವೆ ಸಮತೋಲನ ಕಾಯ್ದುಕೊಳ್ಳಲಾಗಿತ್ತು. ಕೈಗಾರಿಕೆಯ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯ ನಮ್ಮದು. ಹಲವು ವಲಯಗಳಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ’ ಎಂದರು.</p>.<p>‘ಹೂಡಿಕೆದಾರರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಹೊಸ ಕೈಗಾರಿಕಾ ನೀತಿ 2020-25 ರೂಪಿಸಿದೆ. ಜತೆಗೆ ಕಾರ್ಮಿಕ ಕಾನೂನಿನಲ್ಲಿ ತಂದಿರುವ ಸುಧಾರಣೆಗಳು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಹೊಸ ನೀತಿಯಲ್ಲಿರುವ ಅಂಶಗಳು ನೆರವಾಗಲಿವೆ’ ಎಂದರು.</p>.<p>ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ‘ಅಗತ್ಯ ವಸ್ತುಗಳ ಉತ್ಪಾದಿಸುವ ಕೈಗಾರಿಕೆಗಳಿಗೆ ಸರಬರಾಜು ಸರಪಳಿಯು ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ. ಕೋವಿಡ್ ಆರಂಭಿಕ ದಿನಗಳಲ್ಲೂ ರಾಜ್ಯ ಸರ್ಕಾರ ಏರೋಸ್ಪೇಸ್ ಮತ್ತು ರಕ್ಷಣಾ ಸಂಸ್ಥೆಗಳ ಕಾರ್ಯಾಚರಣೆಗೆ ಅಗತ್ಯ ಬೆಂಬಲ ಒದಗಿಸಿತ್ತು’ ಎಂದರು.</p>.<p>* ಆರ್ಥಿಕತೆ, ಕೈಗಾರಿಕೆ ಅಭಿವೃದ್ಧಿ ಉತ್ತೇಜಿಸಲು ಹೂಡಿಕೆ ಸ್ನೇಹಿ ನೀತಿ ಹಾಗೂ ಪೂರಕ ಸೌಲಭ್ಯಗಳನ್ನು ಒದಗಿಸಿ ಕಂಪನಿಗಳನ್ನು ಆಹ್ವಾನಿಸುತ್ತೇವೆ.</p>.<p>-ಜಗದೀಶ ಶೆಟ್ಟರ್, ಕೈಗಾರಿಕಾ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>