ಇಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್ ವಿರೋಧ ಪಕ್ಷದ ಸ್ಥಾನವನ್ನು ಯಡಿಯೂರಪ್ಪ ಶಿಷ್ಯ ಎನ್. ರವಿಕುಮಾರಗೆ ಕೊಟ್ಟು, ಉತ್ತರ ಕರ್ನಾಟಕದವರಿಗೂ ಆದ್ಯತೆ ಕೊಟ್ಟಿದ್ದೇವೆ ಎನ್ನುತ್ತಾರೆ. ಇದು ಹೆಚ್ಚು ದಿನ ನಡೆಯುವುದಿಲ್ಲ’ ಎಂದರು.
‘ವಿಜಯೇಂದ್ರ ಅವರು ತಾವು ಹೇಳಿದಂತೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆದ್ದು ತರಬೇಕು. 27 ಸ್ಥಾನಗಳು ತಂದರೂ ನಡೆಯಲ್ಲ. ಲೋಕಸಭೆ ಚುನಾವಣೆಯ ಬಳಿಕ ಮಧ್ಯಪ್ರದೇಶ ಮತ್ತು ರಾಜಸ್ಥಾನ ಮಾದರಿಯಲ್ಲಿ ಎಲ್ಲರನ್ನೂ ತೆಗೆದು ಹಾಕುತ್ತಾರೆ’ ಎಂದು ಎಚ್ಚರಿಸಿದರು.
‘ಕಾಂಗ್ರೆಸ್ನ ಸುವರ್ಣ ಯುಗ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡಬೇಕಿತ್ತು. ಆದರೆ, ಮಾಡಲಿಲ್ಲ. ದಲಿತರನ್ನು ತಪ್ಪು ದಾರಿಗೆ ಎಳೆಯಲು ಈಗ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಎಂತೆಂಥವರನ್ನೂ ಸಿ.ಎಂ ಮಾಡಿದರು. ಖರ್ಗೆ ಅವರನ್ನು ಏಕೆ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.
‘ಸಿ.ಎಂ ಸಿದ್ದರಾಮಯ್ಯ ಅವರಿಗೆ ಅರಿವು– ಮರೆವು ಶುರುವಾಗಿದೆ. ಮೊನ್ನೆ ಹಿಜಾಬ್ ನಿಷೇಧ ವಾಪಸ್ ಎಂದಿದ್ದರು. ಈಗ ಬೇರೆಯದ್ದೆ ಮಾತಾಡುತ್ತಿದ್ದಾರೆ. ಹಿಜಾಬ್ ಧರಿಸಿ ಎಂದರೆ, ನಾವು ನಮ್ಮ ಮಕ್ಕಳಿಗೆ ಕೇಸರಿ ಶಾಲು ಕೊಟ್ಟು ಕಳುಹಿಸುತ್ತೇವೆ’ ಎಂದರು.