<p>ಮೋಳೆ (ಬೆಳಗಾವಿ ಜಿಲ್ಲೆ): ಇಲ್ಲಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿನಿ ಅಪೂರ್ವಾ ಬಾಹುಬಲಿ ಟೋಪಗಿ ಅವರಿಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 14 ಅಂಕಗಳು ಹೆಚ್ಚುವರಿಯಾಗಿ ಲಭಿಸಿವೆ. ಇದರೊಂದಿಗೆ, ಒಟ್ಟು ಅಂಕಗಳು 617ಕ್ಕೆ ಏರಿಕೆಯಾಗಿವೆ.</p>.<p>‘ಶಿವಮೊಗ್ಗದ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ಅಪೂರ್ವಾ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದಾರೆ. ದೃಷ್ಟಿದೋಷವುಳ್ಳ ವಿದ್ಯಾರ್ಥಿನಿಯರ ಪೈಕಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಶಾಲೆಯವರು ಮಾಹಿತಿ ನೀಡಿದ್ದಾರೆ’ ಎಂದು ತಂದೆ ಬಾಹುಬಲಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮರುಮೌಲ್ಯಮಾಪನದ ಬಳಿಕ ಇಂಗ್ಲಿಷ್ನಲ್ಲಿ 91ರಿಂದ 96, ರಾಜ್ಯಶಾಸ್ತ್ರದಲ್ಲಿ 98ರಿಂದ 100, ಅರ್ಥಶಾಸ್ತ್ರದಲ್ಲಿ 98ರಿಂದ 100 ಮತ್ತು ಸಮಾಜವಿಜ್ಞಾನದಲ್ಲಿ 93ರಿಂದ 98ಕ್ಕೆ ಏರಿಕೆಯಾಗಿದೆ.</p>.<p>‘ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯದ ಕುರಿತು ಡಿಡಿ ಚಂದನ ವಾಹಿನಿಯಲ್ಲಿ ನುರಿತ ಶಿಕ್ಷಕರಿಂದ ಮಾಡಿದ ಪಾಠ ಪ್ರಸಾರ ಮಾಡಬೇಕು. ರೇಡಿಯೊದಲ್ಲಿ ಪಾಠ ಬಿತ್ತರ ಮಾಡಿದರೆ ಅನುಕೂಲ. ಇದರಿಂದ ನಮ್ಮಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಒತ್ತಾಯಿಸಿದರು.</p>.<p>‘ನಮಗೆ ಈ ಸೌಲಭ್ಯವಿಲ್ಲದೆ ಬಹಳ ತೊಂದರೆಯಾಯಿತು. ಪ್ಯಾಟ್ರನ್ ಕೂಡ ಗೊತ್ತಿರಲಿಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೋಳೆ (ಬೆಳಗಾವಿ ಜಿಲ್ಲೆ): ಇಲ್ಲಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿನಿ ಅಪೂರ್ವಾ ಬಾಹುಬಲಿ ಟೋಪಗಿ ಅವರಿಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 14 ಅಂಕಗಳು ಹೆಚ್ಚುವರಿಯಾಗಿ ಲಭಿಸಿವೆ. ಇದರೊಂದಿಗೆ, ಒಟ್ಟು ಅಂಕಗಳು 617ಕ್ಕೆ ಏರಿಕೆಯಾಗಿವೆ.</p>.<p>‘ಶಿವಮೊಗ್ಗದ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ಅಪೂರ್ವಾ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದಾರೆ. ದೃಷ್ಟಿದೋಷವುಳ್ಳ ವಿದ್ಯಾರ್ಥಿನಿಯರ ಪೈಕಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಶಾಲೆಯವರು ಮಾಹಿತಿ ನೀಡಿದ್ದಾರೆ’ ಎಂದು ತಂದೆ ಬಾಹುಬಲಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮರುಮೌಲ್ಯಮಾಪನದ ಬಳಿಕ ಇಂಗ್ಲಿಷ್ನಲ್ಲಿ 91ರಿಂದ 96, ರಾಜ್ಯಶಾಸ್ತ್ರದಲ್ಲಿ 98ರಿಂದ 100, ಅರ್ಥಶಾಸ್ತ್ರದಲ್ಲಿ 98ರಿಂದ 100 ಮತ್ತು ಸಮಾಜವಿಜ್ಞಾನದಲ್ಲಿ 93ರಿಂದ 98ಕ್ಕೆ ಏರಿಕೆಯಾಗಿದೆ.</p>.<p>‘ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯದ ಕುರಿತು ಡಿಡಿ ಚಂದನ ವಾಹಿನಿಯಲ್ಲಿ ನುರಿತ ಶಿಕ್ಷಕರಿಂದ ಮಾಡಿದ ಪಾಠ ಪ್ರಸಾರ ಮಾಡಬೇಕು. ರೇಡಿಯೊದಲ್ಲಿ ಪಾಠ ಬಿತ್ತರ ಮಾಡಿದರೆ ಅನುಕೂಲ. ಇದರಿಂದ ನಮ್ಮಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಒತ್ತಾಯಿಸಿದರು.</p>.<p>‘ನಮಗೆ ಈ ಸೌಲಭ್ಯವಿಲ್ಲದೆ ಬಹಳ ತೊಂದರೆಯಾಯಿತು. ಪ್ಯಾಟ್ರನ್ ಕೂಡ ಗೊತ್ತಿರಲಿಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>