<p><strong>ಬೆಂಗಳೂರು</strong>: ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಜತೆಗೆ ಶನಿವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡುಬಡವರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದಲೇ ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸುವ ನೀತಿಯನ್ನು 2017ರಲ್ಲಿ ರೂಪಿಸಲಾಗಿತ್ತು. ಆದರೆ, ಹಲವು ವರ್ಷಗಳ ನಂತರವೂ ಈ ಕೆಲಸ ಪೂರ್ಣವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ 3,614 ಕಂದಾಯ ಗ್ರಾಮಗಳು ಇದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿ 1,400 ಗ್ರಾಮಗಳನ್ನು ರಚಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ 1,200 ಗ್ರಾಮಗಳನ್ನು ರಚಿಸಲಾಗಿದೆ. ಅಂತಿಮ ಅಧಿಸೂಚನೆ ಆಗದ 1,014 ಗ್ರಾಮಗಳಿವೆ. ಈ ಕೆಲಸವನ್ನು ಶೀಘ್ರ ಮುಗಿಸಬೇಕು’ ಎಂದರು.</p>.<p>‘ಜುಲೈನಿಂದ ಜನಗಣತಿ ಆರಂಭವಾಗುವ ಸಾಧ್ಯತೆ ಇದೆ. ಹಾಗೆ ಆದರೆ, ಆನಂತರ ಅಧಿಸೂಚನೆ ಹೊರಡಿಸಲು ಆಗುವುದಿಲ್ಲ. ಹೀಗಾಗಿ ಜೂನ್ ಅಂತ್ಯದೊಳಗೇ ಎಲ್ಲ ಗ್ರಾಮಗಳಿಗೂ ಅಧಿಸೂಚನೆ ಹೊರಡಿಸಿ, ಜುಲೈ ನಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು’ ಎಂದು ಸೂಚಿಸಿದರು.</p>.<p>ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಮತ್ತು ಭೂ ಮಾಪನಾ ಇಲಾಖೆ ಆಯುಕ್ತ ಮಂಜುನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<p><strong>1 ಲಕ್ಷ ಜನರಿಗೆ ಹಕ್ಕುಪತ್ರ</strong></p><p>‘ಅಂತಿಮ ಅಧಿಸೂಚನೆ ಹೊರಡಿಸಲಾದ 2,600 ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಇದೇ ಮೇ 20ರಂದು ಹಕ್ಕುಪತ್ರ ವಿತರಿಸುತ್ತೇವೆ’ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು.</p><p>‘ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂಬಂಧ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಆಯೋಜಿಸಲಾಗಿದೆ.</p><p>ಒಟ್ಟು 1.41 ಲಕ್ಷ ಫಲಾನುಭವಿಗಳಿದ್ದು, ಈವರೆಗೆ 92,719 ಹಕ್ಕುಪತ್ರಗಳನ್ನು ಸಿದ್ದಪಡಿಸಿದ್ದೀರಿ. ಉಳಿದವರ ಹಕ್ಕುಪತ್ರಗಳನ್ನೂ ಸಿದ್ದಪಡಿಸಿ’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಜತೆಗೆ ಶನಿವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡುಬಡವರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದಲೇ ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸುವ ನೀತಿಯನ್ನು 2017ರಲ್ಲಿ ರೂಪಿಸಲಾಗಿತ್ತು. ಆದರೆ, ಹಲವು ವರ್ಷಗಳ ನಂತರವೂ ಈ ಕೆಲಸ ಪೂರ್ಣವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ 3,614 ಕಂದಾಯ ಗ್ರಾಮಗಳು ಇದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿ 1,400 ಗ್ರಾಮಗಳನ್ನು ರಚಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ 1,200 ಗ್ರಾಮಗಳನ್ನು ರಚಿಸಲಾಗಿದೆ. ಅಂತಿಮ ಅಧಿಸೂಚನೆ ಆಗದ 1,014 ಗ್ರಾಮಗಳಿವೆ. ಈ ಕೆಲಸವನ್ನು ಶೀಘ್ರ ಮುಗಿಸಬೇಕು’ ಎಂದರು.</p>.<p>‘ಜುಲೈನಿಂದ ಜನಗಣತಿ ಆರಂಭವಾಗುವ ಸಾಧ್ಯತೆ ಇದೆ. ಹಾಗೆ ಆದರೆ, ಆನಂತರ ಅಧಿಸೂಚನೆ ಹೊರಡಿಸಲು ಆಗುವುದಿಲ್ಲ. ಹೀಗಾಗಿ ಜೂನ್ ಅಂತ್ಯದೊಳಗೇ ಎಲ್ಲ ಗ್ರಾಮಗಳಿಗೂ ಅಧಿಸೂಚನೆ ಹೊರಡಿಸಿ, ಜುಲೈ ನಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು’ ಎಂದು ಸೂಚಿಸಿದರು.</p>.<p>ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಮತ್ತು ಭೂ ಮಾಪನಾ ಇಲಾಖೆ ಆಯುಕ್ತ ಮಂಜುನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<p><strong>1 ಲಕ್ಷ ಜನರಿಗೆ ಹಕ್ಕುಪತ್ರ</strong></p><p>‘ಅಂತಿಮ ಅಧಿಸೂಚನೆ ಹೊರಡಿಸಲಾದ 2,600 ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಇದೇ ಮೇ 20ರಂದು ಹಕ್ಕುಪತ್ರ ವಿತರಿಸುತ್ತೇವೆ’ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು.</p><p>‘ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂಬಂಧ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಆಯೋಜಿಸಲಾಗಿದೆ.</p><p>ಒಟ್ಟು 1.41 ಲಕ್ಷ ಫಲಾನುಭವಿಗಳಿದ್ದು, ಈವರೆಗೆ 92,719 ಹಕ್ಕುಪತ್ರಗಳನ್ನು ಸಿದ್ದಪಡಿಸಿದ್ದೀರಿ. ಉಳಿದವರ ಹಕ್ಕುಪತ್ರಗಳನ್ನೂ ಸಿದ್ದಪಡಿಸಿ’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>