<p><strong>ಬೆಂಗಳೂರು:</strong> ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಕರಣಗಳನ್ನು ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಹಂತದಲ್ಲಿನ ಅರೆ ನ್ಯಾಯಿಕ ಪ್ರಕರಣಗಳನ್ನು 90 ದಿನಗಳು ಹಾಗೂ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ವ್ಯಾಪ್ತಿಯ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ತಹಶೀಲ್ದಾರ್ಗಳ ಹಂತದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ ಒಟ್ಟು 2,215 ಅರ್ಜಿಗಳು ಬಾಕಿ ಇದ್ದವು. ನಾಲ್ಕು ತಿಂಗಳಲ್ಲಿ 680 ಕ್ಕೆ ಇಳಿದಿದೆ. ಡಿಸೆಂಬರ್ನೊಳಗೆ ಇತ್ಯರ್ಥಗೊಳಿಸಲು ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಹಂತದಲ್ಲಿ ಬಾಕಿ ಉಳಿದಿದ್ದ 59,339 ಪ್ರಕರಣಗಳ ಪೈಕಿ 27,960 ಇತ್ಯರ್ಥಗೊಂಡಿವೆ. 5 ವರ್ಷ ಮೇಲ್ಪಟ್ಟ ಪ್ರಕರಣಗಳನ್ನು 32,787 ಗಳಿಂದ 9,873 ಇಳಿಸಲಾಗಿದೆ. ಜನವರಿ ಕೊನೆಯೊಳಗೆ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚಿಸಲಾಗಿದೆ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚು ಅಹವಾಲು ಸಲ್ಲಿಕೆಯಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಕರಣಗಳನ್ನು ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಹಂತದಲ್ಲಿನ ಅರೆ ನ್ಯಾಯಿಕ ಪ್ರಕರಣಗಳನ್ನು 90 ದಿನಗಳು ಹಾಗೂ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ವ್ಯಾಪ್ತಿಯ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ತಹಶೀಲ್ದಾರ್ಗಳ ಹಂತದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ ಒಟ್ಟು 2,215 ಅರ್ಜಿಗಳು ಬಾಕಿ ಇದ್ದವು. ನಾಲ್ಕು ತಿಂಗಳಲ್ಲಿ 680 ಕ್ಕೆ ಇಳಿದಿದೆ. ಡಿಸೆಂಬರ್ನೊಳಗೆ ಇತ್ಯರ್ಥಗೊಳಿಸಲು ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಹಂತದಲ್ಲಿ ಬಾಕಿ ಉಳಿದಿದ್ದ 59,339 ಪ್ರಕರಣಗಳ ಪೈಕಿ 27,960 ಇತ್ಯರ್ಥಗೊಂಡಿವೆ. 5 ವರ್ಷ ಮೇಲ್ಪಟ್ಟ ಪ್ರಕರಣಗಳನ್ನು 32,787 ಗಳಿಂದ 9,873 ಇಳಿಸಲಾಗಿದೆ. ಜನವರಿ ಕೊನೆಯೊಳಗೆ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚಿಸಲಾಗಿದೆ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚು ಅಹವಾಲು ಸಲ್ಲಿಕೆಯಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>