ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಭೆಯ ಸಂದರ್ಭದಲ್ಲಿ ಶಾಸಕರ ಮನೆ, ಪೊಲೀಸ್ ಠಾಣೆ ರಕ್ಷಿಸಿಕೊಳ್ಳದ ಸರ್ಕಾರ, ಇದರ ಜವಾಬ್ದಾರಿಯನ್ನು ತಾನೇ ವಹಿಸಿಕೊಳ್ಳದೇ ‘ತಲೆ ಕೆಟ್ಟ ಹುಡುಗರ’ ಮೇಲೆ ಹೊರಿಸುವುದು ದುಷ್ಟ ಮತ್ತು ನಿರ್ಲಜ್ಜ ರಾಜಕಾರಣ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.