ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಭಾಗಮಂಡಲ ನಾಪೋಕ್ಲು ರಸ್ತೆ ಜಲಾವೃತವಾಗಿದ್ದು ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು - ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ರಸ್ತೆ ಸಂಪರ್ಕವೇ ಇಲ್ಲದಾಗಿದೆ. ಸಮೀಪದ ಬಲಮುರಿಯಲ್ಲಿ ಸೇತುವೆ, ಚೆರಿಯಪರಂಬು ವ್ಯಾಪ್ತಿಯಲ್ಲಿ ರಸ್ತೆ ಜಲಾವೃತವಾಗಿದೆ. ಕಕ್ಕಬ್ಬೆ ನಾಲಡಿ, ಯವಕಪಾಡಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೊಟ್ಟಮುಡಿಯಲ್ಲಿ ಕಾವೇರಿ ನದಿಯು ರಸ್ತೆ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು ನಾಪೋಕ್ಲು- ಮಡಿಕೇರಿ ಸಂಪರ್ಕ ಕಡಿತಗೊಂಡಿದ್ದು ನಾಪೋಕ್ಲು ದ್ವೀಪವಾಗಿದೆ.