<p><strong>ಬೆಂಗಳೂರು</strong>: ಬೇಡ್ತಿ–ವರದಾ ನದಿ ತಿರುವು, ಅಘನಾಶಿನಿ–ವೇದಾವತಿ ನದಿ ತಿರುವು ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ಕೈಬಿಡಬೇಕು ಎಂದು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಂ ಹೆಬ್ಬಾರ, ಭೀಮಣ್ಣ ನಾಯಕ, ಪರಿಸರ ಹೋರಾಟಗಾರ ಅನಂತ ಹೆಗಡೆ ಅಶೀಸರ ಅವರಿದ್ದ ನಿಯೋಗವು ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಪತ್ರ ನೀಡಿದೆ.</p>.<p>‘ಈ ಎಲ್ಲ ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿವೆ. ಜಿಲ್ಲೆಯು ಈಗಾಗಲೇ ಇಂತಹ ಹಲವು ಬೃಹತ್ ಯೋಜನೆಗಳಿಂದ ನಲುಗಿ ಹೋಗಿದೆ. ಪ್ರಸ್ತಾವಿತ ಈ ಯೋಜನೆಗಳಿಂದ ಇಲ್ಲಿನ ಪರಿಸರಕ್ಕೆ ಮಾರಕವಾಗಲಿದೆ’ ಎಂದು ನಿಯೋಗವು ಕಳವಳ ವ್ಯಕ್ತಪಡಿಸಿದೆ.</p>.<p>‘ಈ ನಾಲ್ಕೂ ನದಿಗಳು ಪಶ್ಚಿಮ ಘಟ್ಟದ ಪ್ರಮುಖ ಜಲಮೂಲಗಳಾಗಿವೆ. ಈ ಯೋಜನೆಗಳಿಂದ ನದಿಪಾತ್ರಕ್ಕೆ, ಅವುಗಳ ಸಹಜ ಸ್ಥಿತಿಗೆ ಧಕ್ಕೆಯಾಗಲಿದೆ. ಪರಿಣಾಮವಾಗಿ ಜಿಲ್ಲೆಯ ಜನರಿಗೆ ನೀರು ಲಭ್ಯವಿಲ್ದೇ ಇರುವ ಸ್ಥಿತಿ ನಿರ್ಮಾಣವಾಗಲಿದೆ ಮತ್ತು ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೂ ಹಾನಿಯಾಗಲಿದೆ. ಹೀಗಾಗಿ ಈ ಯೋಜನೆಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೇಡ್ತಿ–ವರದಾ ನದಿ ತಿರುವು, ಅಘನಾಶಿನಿ–ವೇದಾವತಿ ನದಿ ತಿರುವು ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ಕೈಬಿಡಬೇಕು ಎಂದು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಂ ಹೆಬ್ಬಾರ, ಭೀಮಣ್ಣ ನಾಯಕ, ಪರಿಸರ ಹೋರಾಟಗಾರ ಅನಂತ ಹೆಗಡೆ ಅಶೀಸರ ಅವರಿದ್ದ ನಿಯೋಗವು ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಪತ್ರ ನೀಡಿದೆ.</p>.<p>‘ಈ ಎಲ್ಲ ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿವೆ. ಜಿಲ್ಲೆಯು ಈಗಾಗಲೇ ಇಂತಹ ಹಲವು ಬೃಹತ್ ಯೋಜನೆಗಳಿಂದ ನಲುಗಿ ಹೋಗಿದೆ. ಪ್ರಸ್ತಾವಿತ ಈ ಯೋಜನೆಗಳಿಂದ ಇಲ್ಲಿನ ಪರಿಸರಕ್ಕೆ ಮಾರಕವಾಗಲಿದೆ’ ಎಂದು ನಿಯೋಗವು ಕಳವಳ ವ್ಯಕ್ತಪಡಿಸಿದೆ.</p>.<p>‘ಈ ನಾಲ್ಕೂ ನದಿಗಳು ಪಶ್ಚಿಮ ಘಟ್ಟದ ಪ್ರಮುಖ ಜಲಮೂಲಗಳಾಗಿವೆ. ಈ ಯೋಜನೆಗಳಿಂದ ನದಿಪಾತ್ರಕ್ಕೆ, ಅವುಗಳ ಸಹಜ ಸ್ಥಿತಿಗೆ ಧಕ್ಕೆಯಾಗಲಿದೆ. ಪರಿಣಾಮವಾಗಿ ಜಿಲ್ಲೆಯ ಜನರಿಗೆ ನೀರು ಲಭ್ಯವಿಲ್ದೇ ಇರುವ ಸ್ಥಿತಿ ನಿರ್ಮಾಣವಾಗಲಿದೆ ಮತ್ತು ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೂ ಹಾನಿಯಾಗಲಿದೆ. ಹೀಗಾಗಿ ಈ ಯೋಜನೆಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>