<p><strong>ಬೆಂಗಳೂರು:</strong> ಶಿವಾಜಿನಗರದಲ್ಲಿ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಗೆಲುವಿನಿಂದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ‘ಭಾಗ್ಯದ ಬಾಗಿಲು’ ತೆರೆದಿದೆ. ಸವದಿ ವಿಧಾನಪರಿಷತ್ ಪ್ರವೇಶಕ್ಕೆ ರಿಜ್ವಾನ್ ಗೆಲುವು ದಾರಿ ಮಾಡಿಕೊಟ್ಟಿದೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಸವದಿ ಅವರಿಗೆ ಬಿಎಸ್ವೈ ಸಂಪುಟದಲ್ಲಿ ಸಚಿವ ಸ್ಥಾನ ಅನಾಯಾಸವಾಗಿ ಸಿಕ್ಕಿತು. ಸಚಿವ ಸ್ಥಾನ ಉಳಿಸಿಕೊಳ್ಳಲು ಆರು ತಿಂಗಳೊಳಗೆ ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರಾಗಬೇಕು.</p>.<p>ವಿಧಾನಸಭೆ ಸದಸ್ಯರಾಗಿ ರಿಜ್ವಾನ್ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಮೊದಲೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಬಳಿಕ ಆ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.</p>.<p>‘ಉಪಚುನಾವಣೆಯನ್ನು ಯಾವಾಗ ಬೇಕಾದರೂ ನಡೆಸಬಹುದು. ಆದರೆ, ಸರ್ಕಾರ ಒತ್ತಡ ಹೇರಿ ಬೇಗ ನಡೆಸುವ ಸಾಧ್ಯತೆ ಇದೆ. ಸಂಪುಟಕ್ಕೆ ಸವದಿ ಸೇರ್ಪಡೆ ವರಿಷ್ಠರ ಆಯ್ಕೆ ಆಗಿರುವುದರಿಂದ ಅವರಿಗೆ ಆದಷ್ಟು ಬೇಗ ಪರಿಷತ್ತಿನಲ್ಲಿ ಸ್ಥಾನ ಕಲ್ಪಿಸಿಕೊಡಬೇಕಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಾಜಿನಗರದಲ್ಲಿ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಗೆಲುವಿನಿಂದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ‘ಭಾಗ್ಯದ ಬಾಗಿಲು’ ತೆರೆದಿದೆ. ಸವದಿ ವಿಧಾನಪರಿಷತ್ ಪ್ರವೇಶಕ್ಕೆ ರಿಜ್ವಾನ್ ಗೆಲುವು ದಾರಿ ಮಾಡಿಕೊಟ್ಟಿದೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಸವದಿ ಅವರಿಗೆ ಬಿಎಸ್ವೈ ಸಂಪುಟದಲ್ಲಿ ಸಚಿವ ಸ್ಥಾನ ಅನಾಯಾಸವಾಗಿ ಸಿಕ್ಕಿತು. ಸಚಿವ ಸ್ಥಾನ ಉಳಿಸಿಕೊಳ್ಳಲು ಆರು ತಿಂಗಳೊಳಗೆ ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರಾಗಬೇಕು.</p>.<p>ವಿಧಾನಸಭೆ ಸದಸ್ಯರಾಗಿ ರಿಜ್ವಾನ್ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಮೊದಲೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಬಳಿಕ ಆ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.</p>.<p>‘ಉಪಚುನಾವಣೆಯನ್ನು ಯಾವಾಗ ಬೇಕಾದರೂ ನಡೆಸಬಹುದು. ಆದರೆ, ಸರ್ಕಾರ ಒತ್ತಡ ಹೇರಿ ಬೇಗ ನಡೆಸುವ ಸಾಧ್ಯತೆ ಇದೆ. ಸಂಪುಟಕ್ಕೆ ಸವದಿ ಸೇರ್ಪಡೆ ವರಿಷ್ಠರ ಆಯ್ಕೆ ಆಗಿರುವುದರಿಂದ ಅವರಿಗೆ ಆದಷ್ಟು ಬೇಗ ಪರಿಷತ್ತಿನಲ್ಲಿ ಸ್ಥಾನ ಕಲ್ಪಿಸಿಕೊಡಬೇಕಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>