ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

Last Updated 14 ನವೆಂಬರ್ 2018, 6:55 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ವಡೇರಹಳ್ಳಿ ಸಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಎಂಟು ಜನರು ಗಾಯಗೊಂಡಿದ್ದಾರೆ.

ಹೆದ್ದಾರಿಯಲ್ಲಿನ ರಸ್ತೆ ಉಬ್ಬು ಗಮನಿಸದ ಟೆಂಪೊ ಟ್ರಾವೆಲರ್ ವಾಹನದ ಚಾಲಕ ವೇಗವಾಗಿ ಬಂದು ಎರಡು ಬೈಕ್, ಒಂದು ಆಟೊಗೆ ಡಿಕ್ಕಿ ಹೊಡೆದಿದ್ದಾನೆ.

ಆಟೊ ಹಾಗೂ ಟೆಂಪೊಗಳೆರಡು ಪಲ್ಟಿ ಆಗಿದ್ದು, ಅದರಲ್ಲಿ ಇದ್ದ ಪ್ರಯಾಣಿಕರು ಗಾಯಗೊಂಡರು.

ಗಾಯಾಳುಗಳನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಒಡಾಟಕ್ಕೆ ಅಡಚಣೆ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT