ಉಡುಪಿ: ಬ್ರಹ್ಮಾವರ ಸಮೀಪದ ಕೋಟ ಮಾಣೂರು ಬಳಿ ಶುಕ್ರವಾರ ಮಧ್ಯರಾತ್ರಿ ಆಂಬುಲೆನ್ಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಆಂಬುಲೆನ್ಸ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉಲ್ಲಾಸ್ ತಳೇಕರ್, ಅಶೋಕ್, ಶೈಲೇಶ್ ಮೃತರಾಗಿದ್ದು, ಎಲ್ಲರೂ ಕಾರವಾರದವರು ಎನ್ನಲಾಗಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೃತ ಉಲ್ಲಾಸ್ ತಳೇಕರ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ನಿದ್ದೆಯ ಮಂಪರಿನಲ್ಲಿ ಅಪಘಾತ ಸಂಭವಿಸಿದ್ದು,ಆಂಬುಲೆನ್ಸ್ ಹೆದ್ದಾರಿಯ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಇತರಮೂವರಿಗೆ ಗಂಭೀರ ಗಾಯಗಳಾಗಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.