<p><strong>ವಿಜಯಪುರ:</strong> ಕ್ಯಾಂಟರ್ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಮಂದಿ ಯುವಕರುಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. </p>.<p>ಸಿಂದಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 218ರ ಚಿಕ್ಕಸಿಂದಗಿ ಬಳಿ ಈ ದುರ್ಘಟನೆ ಸಂಭವಿಸಿದೆ.</p>.<p>ಕ್ರೂಸರ್ ಚಾಲಕನ ಅತಿಯಾದ ವೇಗ ಹಾಗೂ ನಿದ್ರೆಗೆ ಜಾರಿದ್ದೇ ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದವರಾಗಿದ್ದು, ಗೋವಾ ಪ್ರವಾಸ ಮುಗಿಸಿಕೊಂಡು, ಸಿಂದಗಿ ಮೂಲಕ ತಮ್ಮೂರಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದ್ದು, ಐದು ಜನರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜಕನಕವಾಗಿದೆ. ಗಾಯಾಳುಗಳನ್ನು ಸಿಂದಗಿ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮೃತಪಟ್ಟವರೆಲ್ಲರೂ ಯುವಕರಾಗಿದ್ದು, ಚಿತ್ತಾಪುರದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.</p>.<p>ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದು, ಸಿಂದಗಿ ಪೊಲೀಸರು ರಸ್ತೆ ಸಂಚಾರಕ್ಕೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಇನ್ನು ಘಟನೆಗೆ ಯುವಕರು ಹೋಳಿ ಹಬ್ಬ ಆಚರಣೆಗೆ ಬದಲಾಗಿ ಗೋವಾಕ್ಕೆ ತೆರಳಿದ್ರು ಎಂದು ತಿಳಿದು ಬಂದಿದೆ.</p>.<p>ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇನ್ನು ಮೃತರನ್ನು ಸಾಗರ (25), ಚಾಂದಬಾಶಾ (24), ಅಜೀಮ್ (26), ಅಂಬರೀಶ (28), ಶಕೀರ ಕೆ.ಕೆ (25), ಗುರು (32), ಶ್ರೀನಾಥ (30), ಯುನೂಸ್ (27) ಮಂಗಸೂಬ್ (27) ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕ್ಯಾಂಟರ್ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಮಂದಿ ಯುವಕರುಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. </p>.<p>ಸಿಂದಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 218ರ ಚಿಕ್ಕಸಿಂದಗಿ ಬಳಿ ಈ ದುರ್ಘಟನೆ ಸಂಭವಿಸಿದೆ.</p>.<p>ಕ್ರೂಸರ್ ಚಾಲಕನ ಅತಿಯಾದ ವೇಗ ಹಾಗೂ ನಿದ್ರೆಗೆ ಜಾರಿದ್ದೇ ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದವರಾಗಿದ್ದು, ಗೋವಾ ಪ್ರವಾಸ ಮುಗಿಸಿಕೊಂಡು, ಸಿಂದಗಿ ಮೂಲಕ ತಮ್ಮೂರಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದ್ದು, ಐದು ಜನರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜಕನಕವಾಗಿದೆ. ಗಾಯಾಳುಗಳನ್ನು ಸಿಂದಗಿ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮೃತಪಟ್ಟವರೆಲ್ಲರೂ ಯುವಕರಾಗಿದ್ದು, ಚಿತ್ತಾಪುರದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.</p>.<p>ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದು, ಸಿಂದಗಿ ಪೊಲೀಸರು ರಸ್ತೆ ಸಂಚಾರಕ್ಕೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಇನ್ನು ಘಟನೆಗೆ ಯುವಕರು ಹೋಳಿ ಹಬ್ಬ ಆಚರಣೆಗೆ ಬದಲಾಗಿ ಗೋವಾಕ್ಕೆ ತೆರಳಿದ್ರು ಎಂದು ತಿಳಿದು ಬಂದಿದೆ.</p>.<p>ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇನ್ನು ಮೃತರನ್ನು ಸಾಗರ (25), ಚಾಂದಬಾಶಾ (24), ಅಜೀಮ್ (26), ಅಂಬರೀಶ (28), ಶಕೀರ ಕೆ.ಕೆ (25), ಗುರು (32), ಶ್ರೀನಾಥ (30), ಯುನೂಸ್ (27) ಮಂಗಸೂಬ್ (27) ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>