ಪ್ರಶಸ್ತಿ ಪುರಸ್ಕೃತ ದೀನನಾಥ ರಜಪೂತ್, ‘2013ರಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದೆ. ಆದರೆ, ಆ ಉದ್ಯೋಗದಲ್ಲಿ ತೃಪ್ತಿ ಸಿಗಲಿಲ್ಲ. ಗ್ರಾಮೀಣ ಜನರ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಆ ಉದ್ಯೋಗಕ್ಕೆ ರಾಜೀನಾಮೆ ನೀಡಿದೆ. ಕೃಷಿಕರ ಉತ್ಪನ್ನಗಳಿಗೆ ಉತ್ತಮ ದರ ಒದಗಿಸುವ ಉದ್ದೇಶದಿಂದ ಬಸ್ತಾರ್ ಜಿಲ್ಲೆಯಲ್ಲಿ 2018ರಲ್ಲಿ ಸಂಸ್ಥೆ ಆರಂಭಿಸಿದೆ. ಆರಂಭದಲ್ಲಿ 337 ಆದಿವಾಸಿ ಮಹಿಳೆಯರ ಕೃಷಿ ಉತ್ಪನ್ನಗಳಿಗೆ ಉತ್ತಮ ದರ ಒದಗಿಸಿ ಕೊಡಲಾಯಿತು. ಈಗ 6,100 ಕೃಷಿಕರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ’ ಎಂದರು.