ಕಾರ್ಮಿಕರ ನಿಧಿ ರಕ್ಷಿಸಲು ಮುಂದಾದ ಅಧಿಕಾರಿಯನ್ನು ವರ್ಗಾಯಿಸುವ ಮೂಲಕ ಶಿಕ್ಷೆ ನೀಡಲಾಗಿದೆ ಎಂದು ಅಧಿಕಾರಿ ವರ್ಗ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲ ತಾಣದಲ್ಲೂ ಆಕ್ಷೇಪಗಳು ಕೇಳಿ ಬಂದಿದ್ದವು. ಮತ್ತೆ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಬೇಕು ಎಂಬ ಒತ್ತಡ ಹೆಚ್ಚುತ್ತಿರುವುದನ್ನು ಮನಗಂಡ ಸರ್ಕಾರ, ರೇಷ್ಮೆ ಇಲಾಖೆಗೆ ವರ್ಗಾಯಿಸಿದೆ.