‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ರೋಷನ್ ಭೂ ಅಕ್ರಮಕ್ಕೆ ಜೈರಾಜ್ ಸಹಕಾರ’ ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಜಾಗಕ್ಕೆ ಕ್ರಯಪತ್ರ ಮಾಡಿಕೊಡುವ ಬಗ್ಗೆ ಕಂದಾಯ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದರು. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ಆಗಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆಗಿನ ಮಾರುಕಟ್ಟೆ ಮೌಲ್ಯಕ್ಕೆ ತಕ್ಕಂತೆ ದರ ನಿಗದಿ ಮಾಡಿ ಕ್ರಯಪತ್ರ ಮಾಡಿಕೊಡಲಾಗಿತ್ತು. ನಾನು ಅಕ್ರಮ ಎಸಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.