ಆರೋಪಿಯು 2007ರಲ್ಲಿ ನಕಲಿ ಪಾಸ್ಪೋರ್ಟ್ ಬಳಸಿಕೊಂಡು ದುಬೈಗೆ ಪರಾರಿಯಾಗಿದ್ದನು. ಕೆಲ ದಿನಗಳ ಹಿಂದೆ ಆತ ವಾಪಸ್ ಬಂದಿದ್ದು, ಕೇರಳದ ಉಪ್ಪಳದಲ್ಲಿ ತಲೆಮರೆಸಿಕೊಂಡಿರುವ ಕುರಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂಕನಾಡಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್, ಸಬ್ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.