<p><strong>ರಾಜರಾಜೇಶ್ವರಿ ನಗರ:</strong> ಸಕಲ ಸೌಲಭ್ಯವುಳ್ಳ ಹವಾನಿಯಂತ್ರಿತ ಹೈಟೆಕ್ ಮಾದರಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸೂಲಿಕೆರೆ ಗ್ರಾಮ ಪಂಚಾಯಿತಿ ಕಟ್ಟಡವನ್ನು ಬಿಡಿಎ ಅಧ್ಯಕ್ಷ, ಶಾಸಕ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.</p>.<p>‘ಸೂಲಿಕೆರೆ ಪಂಚಾಯಿತಿ ಕೆಂಪೇಗೌಡ ಬಡಾವಣೆ ವ್ಯಾಪ್ತಿಗೆ ಬರಲಿದೆ. ಸುತ್ತಮುತ್ತಲಿನ 14 ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು, ಒಳಚರಂಡಿ, ಉದ್ಯಾನ ನಿರ್ಮಿಸಲಾಗುವುದು. 4,025 ಮನೆಗಳಿಗೆ ಶೀಘ್ರ ಹಕ್ಕುಪತ್ರ ನೀಡಲಾಗುವುದು. ಈ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಸರ್ಕಾರ ಅಭಿವೃದ್ಧಿ ಕೆಲಸಕ್ಕೆ ₹ 6 ಕೋಟಿ ಬಿಡುಗಡೆ ಮಾಡಿದೆ. ಬಿಡಿಎ ವತಿಯಿಂದಲೂ ಹಲವು ಕಾಮಗಾರಿ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ, ಸಿಮೆಂಟ್ ರಸ್ತೆ ಕಾಮಗಾರಿಗೆ ₹ 23 ಕೋಟಿ ಬಿಡುಗಡೆಯಾಗಿದೆ. ಇನ್ನೂ ಹಲವು ಅಭಿವೃದ್ಧಿ ಕೆಲಸ ಕೈಗೊಳ್ಳಲು ₹ 48 ಕೋಟಿ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದು, ಎರಡೇ ತಿಂಗಳಲ್ಲಿ ಅನುಮೋದನೆ ಸಿಗಲಿದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ವಿ.ಮಾರೇಗೌಡ ಅಧ್ಯಕ್ಷತೆ ವಹಿಸಿ, ‘ಸರ್ಕಾರ ಮತ್ತು ದಾನಿಗಳ ಸಹಕಾರದೊಂದಿಗೆ 50 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ’ ಎಂದು ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭಾ ತಿಮ್ಮೇಗೌಡ ಮತ್ತಿತರರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ಸಕಲ ಸೌಲಭ್ಯವುಳ್ಳ ಹವಾನಿಯಂತ್ರಿತ ಹೈಟೆಕ್ ಮಾದರಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸೂಲಿಕೆರೆ ಗ್ರಾಮ ಪಂಚಾಯಿತಿ ಕಟ್ಟಡವನ್ನು ಬಿಡಿಎ ಅಧ್ಯಕ್ಷ, ಶಾಸಕ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.</p>.<p>‘ಸೂಲಿಕೆರೆ ಪಂಚಾಯಿತಿ ಕೆಂಪೇಗೌಡ ಬಡಾವಣೆ ವ್ಯಾಪ್ತಿಗೆ ಬರಲಿದೆ. ಸುತ್ತಮುತ್ತಲಿನ 14 ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು, ಒಳಚರಂಡಿ, ಉದ್ಯಾನ ನಿರ್ಮಿಸಲಾಗುವುದು. 4,025 ಮನೆಗಳಿಗೆ ಶೀಘ್ರ ಹಕ್ಕುಪತ್ರ ನೀಡಲಾಗುವುದು. ಈ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಸರ್ಕಾರ ಅಭಿವೃದ್ಧಿ ಕೆಲಸಕ್ಕೆ ₹ 6 ಕೋಟಿ ಬಿಡುಗಡೆ ಮಾಡಿದೆ. ಬಿಡಿಎ ವತಿಯಿಂದಲೂ ಹಲವು ಕಾಮಗಾರಿ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ, ಸಿಮೆಂಟ್ ರಸ್ತೆ ಕಾಮಗಾರಿಗೆ ₹ 23 ಕೋಟಿ ಬಿಡುಗಡೆಯಾಗಿದೆ. ಇನ್ನೂ ಹಲವು ಅಭಿವೃದ್ಧಿ ಕೆಲಸ ಕೈಗೊಳ್ಳಲು ₹ 48 ಕೋಟಿ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದು, ಎರಡೇ ತಿಂಗಳಲ್ಲಿ ಅನುಮೋದನೆ ಸಿಗಲಿದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ವಿ.ಮಾರೇಗೌಡ ಅಧ್ಯಕ್ಷತೆ ವಹಿಸಿ, ‘ಸರ್ಕಾರ ಮತ್ತು ದಾನಿಗಳ ಸಹಕಾರದೊಂದಿಗೆ 50 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ’ ಎಂದು ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭಾ ತಿಮ್ಮೇಗೌಡ ಮತ್ತಿತರರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>