ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯದ ಎರಡು ಕ್ಷೇತ್ರಗಳ ಟಿಕೆಟ್ ಪ್ರಕಟವಾಗುವುದು ತಡವಾಗಿದೆ. ಯಾವುದೇ ಕಾರಣಕ್ಕೂ ಆರ್.ಆರ್.ನಗರ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ತಪ್ಪುವುದಿಲ್ಲ. ಬಿಜೆಪಿ ಸೇರಿದ ನನ್ನನ್ನೂ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಿರುವಾಗ, ಒಬ್ಬರಿಗೆ ಟಿಕೆಟ್ ಕೈ ತಪ್ಪುವುದು ಹೇಗೆ’ ಎಂದು ಸೋಮಶೇಖರ್ ಪ್ರಶ್ನಿಸಿದರು.