<p><strong>ಬೆಂಗಳೂರು</strong>: ಹೆಣ್ಣು ರಾಜಕೀಯಕ್ಕೆ ಬರೋದು ತಪ್ಪೇ? ಜನರ ಸೇವೆ ಮಾಡೋದು ತಪ್ಪೇ? ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಪ್ರಶ್ನಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಷೋ ನಡೆಸಿ ಮತ ಯಾಚಿಸಿದ ಅವರು, ‘ಕಾಂಗ್ರೆಸ್ ಮಹಿಳೆಗೆ ಅವಕಾಶ ನೀಡಿದೆ. ಅದನ್ನು ಸಹಿಸದ ಎದುರಾಳಿಗಳು ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ’ ಎಂದರು.</p>.<p>ರಾಜಕೀಯದಲ್ಲಿ ಮಹಿಳೆಯರಿಗೆ ಅವಕಾಶ ಸಿಗುವುದು ವಿರಳ. ಅಂತಹ ಅವಕಾಶವೊಂದನ್ನು ಕಾಂಗ್ರೆಸ್ ಕಲ್ಪಿಸಿದೆ. ಮಹಿಳೆಯೂ ಅತ್ಯುತ್ತಮವಾಗಿ ದೇಶದ ಸೇವೆ ಮಾಡಲು ಸಮರ್ಥಳು ಎಂಬುದನ್ನು ನಿರೂಪಿಸಲು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.</p>.<p>‘ಉಪ ಚುನಾವಣೆಯ ಅಭ್ಯರ್ಥಿಯ ಆಯ್ಕೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗುತ್ತಿದ್ದಂತೆಯೇ ನನ್ನ ಮೇಲೆ ಗದಾಪ್ರಹಾರ ಆರಂಭವಾಯಿತು. ನನ್ನ ಗಂಡನ ಹೆಸರನ್ನು ನಾನು ಚುನಾವಣೆಯಲ್ಲಿ ಬಳಸಬಾರದು ಎಂದು ಕೆಲವರು ಹೇಳಿದರು. ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ತೊಂದರೆ ನೀಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p class="Subhead">ಅರ್ಹ ಅಭ್ಯರ್ಥಿಯನ್ನು ಬೆಂಬಲಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಆ ನೀಚ ರಾಜಕಾರಣಿ ಪಕ್ಷದಿಂದ ತೊಲಗಿದ್ದು ಒಳ್ಳೆಯದೇ ಆಯಿತು. ಅಂತಹವರನ್ನು ಬೆಳೆಸಿ ನಾವು ರಾಜಕಾರಣ ಮಾಡುವ ಅಗತ್ಯವಿಲ್ಲ. ಯುವಕರು, ಮಹಿಳೆಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಕುಸುಮಾ ಅವರನ್ನು ಕಣಕ್ಕಿಳಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಣ್ಣು ರಾಜಕೀಯಕ್ಕೆ ಬರೋದು ತಪ್ಪೇ? ಜನರ ಸೇವೆ ಮಾಡೋದು ತಪ್ಪೇ? ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಪ್ರಶ್ನಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಷೋ ನಡೆಸಿ ಮತ ಯಾಚಿಸಿದ ಅವರು, ‘ಕಾಂಗ್ರೆಸ್ ಮಹಿಳೆಗೆ ಅವಕಾಶ ನೀಡಿದೆ. ಅದನ್ನು ಸಹಿಸದ ಎದುರಾಳಿಗಳು ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ’ ಎಂದರು.</p>.<p>ರಾಜಕೀಯದಲ್ಲಿ ಮಹಿಳೆಯರಿಗೆ ಅವಕಾಶ ಸಿಗುವುದು ವಿರಳ. ಅಂತಹ ಅವಕಾಶವೊಂದನ್ನು ಕಾಂಗ್ರೆಸ್ ಕಲ್ಪಿಸಿದೆ. ಮಹಿಳೆಯೂ ಅತ್ಯುತ್ತಮವಾಗಿ ದೇಶದ ಸೇವೆ ಮಾಡಲು ಸಮರ್ಥಳು ಎಂಬುದನ್ನು ನಿರೂಪಿಸಲು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.</p>.<p>‘ಉಪ ಚುನಾವಣೆಯ ಅಭ್ಯರ್ಥಿಯ ಆಯ್ಕೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗುತ್ತಿದ್ದಂತೆಯೇ ನನ್ನ ಮೇಲೆ ಗದಾಪ್ರಹಾರ ಆರಂಭವಾಯಿತು. ನನ್ನ ಗಂಡನ ಹೆಸರನ್ನು ನಾನು ಚುನಾವಣೆಯಲ್ಲಿ ಬಳಸಬಾರದು ಎಂದು ಕೆಲವರು ಹೇಳಿದರು. ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ತೊಂದರೆ ನೀಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p class="Subhead">ಅರ್ಹ ಅಭ್ಯರ್ಥಿಯನ್ನು ಬೆಂಬಲಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಆ ನೀಚ ರಾಜಕಾರಣಿ ಪಕ್ಷದಿಂದ ತೊಲಗಿದ್ದು ಒಳ್ಳೆಯದೇ ಆಯಿತು. ಅಂತಹವರನ್ನು ಬೆಳೆಸಿ ನಾವು ರಾಜಕಾರಣ ಮಾಡುವ ಅಗತ್ಯವಿಲ್ಲ. ಯುವಕರು, ಮಹಿಳೆಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಕುಸುಮಾ ಅವರನ್ನು ಕಣಕ್ಕಿಳಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>