<p><strong>ನವದೆಹಲಿ</strong>: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. </p>.<p>ಅವರು ಸಂಸತ್ ಭವನದಲ್ಲಿ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸುಮಾರು 7 ನಿಮಿಷ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು. ಬಳಿಕ ನಿರ್ಮಲಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಾಜನಾಥ ಅವರಿಗೆ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪದೋಷ ಸರಿಪಡಿಸುವುದಾಗಿ ಗಡ್ಕರಿ ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ನಲ್ಲಿ 26 ಕಿ.ಮೀ. ಸುರಂಗ ನಿರ್ಮಾಣಕ್ಕೆ (ಮಾರನಹಳ್ಳಿಯಿಂದ ಅಡ್ಡಹೊಳೆ ವರೆಗೆ) ಅನುಮತಿ ನೀಡುವಂತೆ ಗಡ್ಕರಿ ಅವರಿಗೆ ಮನವಿ ಮಾಡಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. </p>.<p>2023–24ನೇ ಆರ್ಥಿಕ ವರ್ಷದಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲ ಕಾಮಗಾರಿಗಳ ಅನುದಾನವನ್ನು ₹10 ಸಾವಿರ ಕೋಟಿಗೆ ಹೆಚ್ಚಿಸಬೇಕು. ಪ್ರವಾಹ ಹಾನಿ ಕಾಮಗಾರಿಗಳಿಗೆ ₹250 ಕೋಟಿ ಅನುದಾನ ನೀಡಬೇಕು. ಹೆದ್ದಾರಿಗಳ ನಿರ್ವಹಣೆ ಹಾಗೂ ದುರಸ್ತಿ ಕಾಮಗಾರಿಗಳ ಅನುದಾನವನ್ನು ₹50 ಕೋಟಿಗೆ ಏರಿಸಬೇಕು. ರಾಜ್ಯ ರಸ್ತೆಗಳ ಸುಧಾರಣೆಗಾಗಿ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ ₹1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. </p>.<p>ಕೊಳ್ಳೆಗಾಲ, ಗುಂಡ್ಲುಪೇಟೆ, ನಂಜನಗೂಡು, ಮೈಸೂರು ಹೆದ್ದಾರಿಯನ್ನು (150 ಕಿ.ಮೀ) ಚತುಷ್ಪಥ/ ಆರು ಪಥದ ಹೆದ್ದಾರಿಯನ್ನಾಗಿ ಪರಿವರ್ತಿಸಬೇಕು. ಕನಕಪುರ ರಸ್ತೆಯಿಂದ ತಮಿಳುನಾಡು ಗಡಿ ವರೆಗಿನ ಹೆದ್ದಾರಿಯನ್ನು ವಿಸ್ತರಣೆ ಮಾಡಲು ಅನುಮೋದನೆ ನೀಡಬೇಕು ಎಂದೂ ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. </p>.<p>ಅವರು ಸಂಸತ್ ಭವನದಲ್ಲಿ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸುಮಾರು 7 ನಿಮಿಷ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು. ಬಳಿಕ ನಿರ್ಮಲಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಾಜನಾಥ ಅವರಿಗೆ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪದೋಷ ಸರಿಪಡಿಸುವುದಾಗಿ ಗಡ್ಕರಿ ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ನಲ್ಲಿ 26 ಕಿ.ಮೀ. ಸುರಂಗ ನಿರ್ಮಾಣಕ್ಕೆ (ಮಾರನಹಳ್ಳಿಯಿಂದ ಅಡ್ಡಹೊಳೆ ವರೆಗೆ) ಅನುಮತಿ ನೀಡುವಂತೆ ಗಡ್ಕರಿ ಅವರಿಗೆ ಮನವಿ ಮಾಡಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. </p>.<p>2023–24ನೇ ಆರ್ಥಿಕ ವರ್ಷದಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲ ಕಾಮಗಾರಿಗಳ ಅನುದಾನವನ್ನು ₹10 ಸಾವಿರ ಕೋಟಿಗೆ ಹೆಚ್ಚಿಸಬೇಕು. ಪ್ರವಾಹ ಹಾನಿ ಕಾಮಗಾರಿಗಳಿಗೆ ₹250 ಕೋಟಿ ಅನುದಾನ ನೀಡಬೇಕು. ಹೆದ್ದಾರಿಗಳ ನಿರ್ವಹಣೆ ಹಾಗೂ ದುರಸ್ತಿ ಕಾಮಗಾರಿಗಳ ಅನುದಾನವನ್ನು ₹50 ಕೋಟಿಗೆ ಏರಿಸಬೇಕು. ರಾಜ್ಯ ರಸ್ತೆಗಳ ಸುಧಾರಣೆಗಾಗಿ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ ₹1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. </p>.<p>ಕೊಳ್ಳೆಗಾಲ, ಗುಂಡ್ಲುಪೇಟೆ, ನಂಜನಗೂಡು, ಮೈಸೂರು ಹೆದ್ದಾರಿಯನ್ನು (150 ಕಿ.ಮೀ) ಚತುಷ್ಪಥ/ ಆರು ಪಥದ ಹೆದ್ದಾರಿಯನ್ನಾಗಿ ಪರಿವರ್ತಿಸಬೇಕು. ಕನಕಪುರ ರಸ್ತೆಯಿಂದ ತಮಿಳುನಾಡು ಗಡಿ ವರೆಗಿನ ಹೆದ್ದಾರಿಯನ್ನು ವಿಸ್ತರಣೆ ಮಾಡಲು ಅನುಮೋದನೆ ನೀಡಬೇಕು ಎಂದೂ ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>