ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ವಿವಿಧ ಭಾಗಗಳ ಹೋರಾಟಗಾರರು, ‘ತಕ್ಷಣವೇ ಅನುದಾನ ವಾಪಸ್ ನೀಡದಿದ್ದರೆ, 1 ಲಕ್ಷ ಮಂದಿ ಸೇರಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು. ‘ವಿಶೇಷ ಘಟಕ ಯೋಜನೆಗೆ ಮೀಸಲಿಟ್ಟ ಹಣದ ದುರುಪಯೋಗ ಹೆಚ್ಚಾಗಿದೆ. ನಿಗದಿತ ಉದ್ದೇಶಕ್ಕೆ ಹಣ ವಿನಿಯೋಗಿಸದ ಅಧಿಕಾರಿಗಳ ವಿರುದ್ಧ ಕ್ರಮವನ್ನೂ ತೆಗೆದುಕೊಂಡಿಲ್ಲ’ ಎಂದು ದೂರಿದರು.