<p>ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ 230 ಕಿ.ಮೀ ರಸ್ತೆ, 585.83 ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕೆ ₹222 ಕೋಟಿ ಬಿಡುಗಡೆ ಮಾಡಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>ಸೋಮವಾರ ನಡೆದ ಸಚಿವ ಸಂಪುಟದ ಇತರೆ ತೀರ್ಮಾನಗಳು ಹೀಗಿವೆ.</p>.<p>*ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 10 ಕ್ರಿಮಿನಲ್ ಮೊಕದ್ದಮೆಗಳು ವಾಪಸ್</p>.<p>*ಬಿಎಂಟಿಸಿಗೆ 20 ಎಲೆಕ್ಟ್ರಿಕ್ ಮಿನಿ ಬಸ್ ಖರೀದಿಸಲು ₹19.13 ಕೋಟಿ ನೆರವು</p>.<p>*ಬೆಂಗಳೂರು ಗಾಲ್ಫ್ ಸಂಸ್ಥೆಗೆ ಸ್ಯಾಂಕಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯ 59.18 ಎಕರೆ ಜಾಗದ ಲೀಸ್ ಮುಂದುವರಿಕೆ.</p>.<p>*ಕಲ್ಯಾಣ ಕರ್ನಾಟಕ ಭಾಗದ ಐದು ವಸತಿ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ₹ 75 ಕೋಟಿ.</p>.<p>*ಕರ್ನಾಟಕ ಸಹಕಾರ ಸೇವೆ (ವೃಂದ ಮತ್ತು ನೇಮಕಾತಿ ನಿಯಮಗಳು 2023)ಕ್ಕೆ ಅನುಮೋದನೆ.</p>.<p>*ವಿದ್ಯುತ್ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಘಟಕಗಳ ಕಾರ್ಮಿಕರಿಗೆ ವಾರ್ಷಿಕ ₹ 5,000 ನೆರವು ನೀಡಲು, ನೇಯ್ಗೆ ಉದ್ದೇಶಕ್ಕೆ ಸಹಕಾರಿ ಬ್ಯಾಂಕುಗಳು, ಸಂಘಗಳ ಮೂಲಕ ₹2 ಲಕ್ಷವರೆಗೆ ಶೂನ್ಯಬಡ್ಡಿಯಲ್ಲಿ ಸಾಲ ಒದಗಿಸುವ ಆದೇಶಕ್ಕೆ ಅನುಮೋದನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ 230 ಕಿ.ಮೀ ರಸ್ತೆ, 585.83 ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕೆ ₹222 ಕೋಟಿ ಬಿಡುಗಡೆ ಮಾಡಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>ಸೋಮವಾರ ನಡೆದ ಸಚಿವ ಸಂಪುಟದ ಇತರೆ ತೀರ್ಮಾನಗಳು ಹೀಗಿವೆ.</p>.<p>*ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 10 ಕ್ರಿಮಿನಲ್ ಮೊಕದ್ದಮೆಗಳು ವಾಪಸ್</p>.<p>*ಬಿಎಂಟಿಸಿಗೆ 20 ಎಲೆಕ್ಟ್ರಿಕ್ ಮಿನಿ ಬಸ್ ಖರೀದಿಸಲು ₹19.13 ಕೋಟಿ ನೆರವು</p>.<p>*ಬೆಂಗಳೂರು ಗಾಲ್ಫ್ ಸಂಸ್ಥೆಗೆ ಸ್ಯಾಂಕಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯ 59.18 ಎಕರೆ ಜಾಗದ ಲೀಸ್ ಮುಂದುವರಿಕೆ.</p>.<p>*ಕಲ್ಯಾಣ ಕರ್ನಾಟಕ ಭಾಗದ ಐದು ವಸತಿ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ₹ 75 ಕೋಟಿ.</p>.<p>*ಕರ್ನಾಟಕ ಸಹಕಾರ ಸೇವೆ (ವೃಂದ ಮತ್ತು ನೇಮಕಾತಿ ನಿಯಮಗಳು 2023)ಕ್ಕೆ ಅನುಮೋದನೆ.</p>.<p>*ವಿದ್ಯುತ್ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಘಟಕಗಳ ಕಾರ್ಮಿಕರಿಗೆ ವಾರ್ಷಿಕ ₹ 5,000 ನೆರವು ನೀಡಲು, ನೇಯ್ಗೆ ಉದ್ದೇಶಕ್ಕೆ ಸಹಕಾರಿ ಬ್ಯಾಂಕುಗಳು, ಸಂಘಗಳ ಮೂಲಕ ₹2 ಲಕ್ಷವರೆಗೆ ಶೂನ್ಯಬಡ್ಡಿಯಲ್ಲಿ ಸಾಲ ಒದಗಿಸುವ ಆದೇಶಕ್ಕೆ ಅನುಮೋದನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>