<p><strong>ಬೆಂಗಳೂರು</strong>: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಬಾಕಿಯಿರುವ ಬಿಲ್ನಲ್ಲಿ ಶೇ 50ರಷ್ಟು ಮೊತ್ತವನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಸಚಿವರು ಭರವಸೆ ನೀಡಿದ್ದಾರೆ.</p><p>ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಅವರು ಗುತ್ತಿಗೆದಾರರೊಂದಿಗೆ ಗುರುವಾರ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ‘ಸುಮಾರು ₹2 ಸಾವಿರ ಕೋಟಿ ಬಿಲ್ ಬಾಕಿ ಇದ್ದು, ಅದನ್ನು ಜ್ಯೇಷ್ಠತೆ ಆಧಾರದಲ್ಲಿ ಕೂಡಲೇ ಬಿಡುಗಡೆ ಮಾಡಬೇಕು. ವಿಶೇಷ ಎಲ್ಒಸಿ<br>ಗಳನ್ನು ನೀಡಬಾರದು. ದೊಡ್ಡ ಮೊತ್ತದ ಪ್ಯಾಕೇಜ್ಗಳನ್ನು ಮಾಡಬಾರದು’ ಎಂದು ಗುತ್ತಿಗೆದಾರರು ಮನವಿ ಮಾಡಿಕೊಂಡರು.</p><p>‘ಮಾರ್ಚ್ ಅಂತ್ಯದೊಳಗೆ ಬಾಕಿ ಬಿಲ್ನ ಮೊತ್ತದಲ್ಲಿ ₹1,000 ಕೋಟಿ ಪಾವತಿಸಲಾಗುತ್ತದೆ. ಜ್ಯೇಷ್ಠತೆಯನ್ನು ಮೀರದಂತೆ ಹಾಗೂ ವಿಶೇಷ ಎಲ್ಒಸಿ ಗಳನ್ನೂ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಬೋಸರಾಜು ತಿಳಿಸಿದರು.</p><p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಸಮಸ್ಯೆಗಳನ್ನು ಈಡೇರಿಸಲು ಭರವಸೆ ನೀಡಿದರು.</p><p>‘ಸುಮಾರು ₹3 ಸಾವಿರ ಕೋಟಿ ಬಿಲ್ ಬಾಕಿಯಲ್ಲಿ ₹1,500 ಕೋಟಿ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿಯವರೊಂದಿಗೆ ನಡೆಯುವ ಸಭೆಯಲ್ಲಿ ಗುತ್ತಿಗೆದಾರರನ್ನೂ ಕರೆದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸಲಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಬಾಕಿಯಿರುವ ಬಿಲ್ನಲ್ಲಿ ಶೇ 50ರಷ್ಟು ಮೊತ್ತವನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಸಚಿವರು ಭರವಸೆ ನೀಡಿದ್ದಾರೆ.</p><p>ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಅವರು ಗುತ್ತಿಗೆದಾರರೊಂದಿಗೆ ಗುರುವಾರ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ‘ಸುಮಾರು ₹2 ಸಾವಿರ ಕೋಟಿ ಬಿಲ್ ಬಾಕಿ ಇದ್ದು, ಅದನ್ನು ಜ್ಯೇಷ್ಠತೆ ಆಧಾರದಲ್ಲಿ ಕೂಡಲೇ ಬಿಡುಗಡೆ ಮಾಡಬೇಕು. ವಿಶೇಷ ಎಲ್ಒಸಿ<br>ಗಳನ್ನು ನೀಡಬಾರದು. ದೊಡ್ಡ ಮೊತ್ತದ ಪ್ಯಾಕೇಜ್ಗಳನ್ನು ಮಾಡಬಾರದು’ ಎಂದು ಗುತ್ತಿಗೆದಾರರು ಮನವಿ ಮಾಡಿಕೊಂಡರು.</p><p>‘ಮಾರ್ಚ್ ಅಂತ್ಯದೊಳಗೆ ಬಾಕಿ ಬಿಲ್ನ ಮೊತ್ತದಲ್ಲಿ ₹1,000 ಕೋಟಿ ಪಾವತಿಸಲಾಗುತ್ತದೆ. ಜ್ಯೇಷ್ಠತೆಯನ್ನು ಮೀರದಂತೆ ಹಾಗೂ ವಿಶೇಷ ಎಲ್ಒಸಿ ಗಳನ್ನೂ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಬೋಸರಾಜು ತಿಳಿಸಿದರು.</p><p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಸಮಸ್ಯೆಗಳನ್ನು ಈಡೇರಿಸಲು ಭರವಸೆ ನೀಡಿದರು.</p><p>‘ಸುಮಾರು ₹3 ಸಾವಿರ ಕೋಟಿ ಬಿಲ್ ಬಾಕಿಯಲ್ಲಿ ₹1,500 ಕೋಟಿ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿಯವರೊಂದಿಗೆ ನಡೆಯುವ ಸಭೆಯಲ್ಲಿ ಗುತ್ತಿಗೆದಾರರನ್ನೂ ಕರೆದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸಲಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>