ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ. 26ರಂದು ಪತ್ರ ಬರೆದಿರುವ ಬಿಎಸ್ಎನ್ಎಲ್ ಕರ್ನಾಟಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ (ಸಿಜಿಎಂ) ಜಿ.ಆರ್. ರವಿ, ‘ಬಾಕಿ ಉಳಿಸಿಕೊಂಡಿರುವ ಬಿಲ್ಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಹಣ ಪಾವತಿಸುವಂತೆ ಎಲ್ಲ ಇಲಾಖೆ, ಸಂಸ್ಥೆ, ನಿಗಮ– ಮಂಡಳಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.